ಪರಿಶಿಷ್ಟ ಪಂಗಡ ಮೀಸಲಾತಿ ಕಿಚ್ಚಿಗೆ ಕಿಚ್ಚ ಎಂಟ್ರಿ
ಪರಿಶಿಷ್ಟ ಪಂಗಡಕ್ಕೆ 7.5ರಷ್ಟು ಮೀಸಲಾತಿ ಬೇಡಿಕೆಗೆ ನಟ ಕಿಚ್ಚ ಸುದೀಪ್ ಸಹ ಈ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.
ಬೆಂಗಳೂರು, (ಜೂ.25): ಪರಿಶಿಷ್ಟ ಪಂಗಡಕ್ಕೆ 7.5ರಷ್ಟು ಮೀಸಲಾತಿಗೆ ಒತ್ತಾಯಿಸಿ ಮಂಗಳವಾರ ಬೆಂಗಳೂರಿನಲ್ಲಿ ವಾಲ್ಮೀಕಿ ಸಮುದಾಯ ಬೃಹತ್ ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿತು. ಇದಕ್ಕೆ ಶಾಸಕ ಶ್ರೀರಾಮುಲು, ಕಾಂಗ್ರೆಸ್ ಮುಖಂಡ ಉಗ್ರಪ್ಪ, ನಾಗೇಂದ್ರ ಸೇರಿಂದಂತೆ ವಾಲ್ಮೀಕಿ ಸಮುದಾಯದ ರಾಜಕೀಯ ನಾಯಕರು ಬೆಂಬಲ ಸೂಚಿಸಿದರು.
ನಟ ಕಿಚ್ಚ ಸುದೀಪ್ ಸಹ ಈ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ವಿದ್ಯಾರ್ಥಿಗಳ ಒಳಿತಿಗಾಗಿ ಸ್ವಾಮೀಜಿ ಅವರು ಪಾದಯಾತ್ರೆ ನಡೆಸುತ್ತಿದ್ದು, ಅವರ ಪರವಾಗಿ ತಾನಿದ್ದೇನೆ ಎಂದು ಕಿಚ್ಚ ಟ್ವೀಟ್ ಮಾಡಿದ್ದಾರೆ.