Asianet Suvarna News Asianet Suvarna News

ಸದನದಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸದನದಲ್ಲಿ ಕಣ್ಣೀರು ಹಾಕಿದ್ದಾರೆ. ತಮ್ಮ ಮನದಲ್ಲಿನ ನೋವನ್ನು ತೋಡಿಕೊಂಡಿದ್ದಾರೆ. ನನ್ನ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದ್ದು ಈ ಬಗ್ಗೆ ತನಿಖೆಯಾಗಬೇಕು ಎನ್ನುತ್ತಲೇ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಕಣ್ಣೀರು ಹಾಕಿದ್ದಾರೆ.

ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸದನದಲ್ಲಿ ಕಣ್ಣೀರು ಹಾಕಿದ್ದಾರೆ. ತಮ್ಮ ಮನದಲ್ಲಿನ ನೋವನ್ನು ತೋಡಿಕೊಂಡಿದ್ದಾರೆ. ನನ್ನ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದ್ದು ಈ ಬಗ್ಗೆ ತನಿಖೆಯಾಗಬೇಕು ಎನ್ನುತ್ತಲೇ ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಕಣ್ಣೀರು ಹಾಕಿದ್ದಾರೆ.

ಅವಮಾನವನ್ನು ಅನುಭವಿಸಿದವನಿಗೆ ಅದರ ನಿಜವಾದ ತಿವಿತದ ನೋವು ಗೊತ್ತಾಗುತ್ತದೆ. ನನ್ನ ಬಗ್ಗೆ ಯಾರು ಅಪಪ್ರಚಾರ ಮಾಡಿದರೋ ಗೊತ್ತಿಲ್ಲ. ಈ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯ ಮಾಡಿದರು. ಮಧ್ಯ ಪ್ರವೇಶ ಮಾಡಿದ ಸ್ಪೀಕರ್ ರಮೇಶ್ ಕುಮಾರ್, ನೀವು ಬಹಳ ಕಾಲದಿಂದ ಸದನದಲ್ಲಿ ಇದ್ದವರು.. ದಯವಿಟ್ಟು ಕುಳಿತುಕೊಳ್ಳಿ ಎಂದು ಮನವಿ ಮಾಡಿಕೊಂಡರು.