Video: ಸೋತಿರುವ ಸವದಿಗೆ DCM: ಬಿಜೆಪಿಯಲ್ಲಿ ಶುರುವಾಯ್ತು ಕಾಲೆಳೆದಾಟ..!
ಸೋತಿರುವ ಲಕ್ಷ್ಮಣ ಸವದಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದಂತೆ ಬಿಜೆಪಿಯಲ್ಲಿ ಕಾಲೆಳೆದಾಟ ಶುರುವಾಗಿದೆ.
ಬೆಂಗಳೂರು, [ಆ.26]: ಸೋತಿರುವ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡಿರುವುದಕ್ಕೆ ಬಿಜೆಪಿಯಲ್ಲಿ ಅಸಮಾಧನಗಳು ವ್ಯಕ್ತವಾಗಿವೆ. ಇದಕ್ಕೆ ಪೂರಕವೆಂಬಂತೆ ಮೊನ್ನೇ ಅಷ್ಟೇ ಸಿಎಂ ಬಿಎಸ್ ಯಡಿಯೂರಪ್ಪ ಅವರ ಎದುರೇ ಶಾಸಕ ಉಮೇಶ್ ಕತ್ತಿ ಮತ್ತು ಸಚಿವ ಲಕ್ಷ್ಮಣ ಸವದಿ ನಡುವೆ ಜಟಾಪಟಿ ನಡೆದಿತ್ತು. ಇದರ ಬೆನ್ನಲ್ಲೇ ಇದೀಗ ಸವದಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದಂತೆ ಮತ್ತೋರ್ವ ಬಿಜೆಪಿ ಶಾಸಕ ಗರಂ ಆಗಿದ್ದು, ಈ ಬಗ್ಗೆ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸೋತವರಿಗೆ ಇಷ್ಟೊಂದು ಸ್ಥಾನಮಾವೇಕೆ? ಎನ್ನುವುದನ್ನು ಪ್ರಶ್ನೆ ಮಾಡಿದ್ದಾರೆ. ಯಾರು ಆ ಶಾಸಕ? ವಿಡಿಯೋನಲ್ಲಿ ನೋಡಿ.