Asianet Suvarna News Asianet Suvarna News

ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೇ BJPಯಲ್ಲಿ ಬಂಡಾಯದ ಬಿಸಿ

ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಇದೀಗ ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಕಾರಣಕ್ಕೂ ಅನರ್ಹ ಶಾಸಕರಿಗೆ ಟಿಕೆಟ್ ಕೊಡಬಾರದು ಎಂಬ ಒತ್ತಾಯವನ್ನೂ ಮುಖಂಡರು ಹೇರಿದ್ದಾರೆ. ಮಹಾಲಕ್ಷ್ಮಿ ಲೇಔಟ್‌ನಲ್ಲಿ ಗೋಪಾಲಯ್ಯ ಸ್ಪರ್ಧೆಗೆ ಬಿಜೆಪಿಯಲ್ಲಿಯೇ ತೀವ್ರ ವಿರೋಧ ವ್ಯಕ್ತವಾಗಿದೆ.

ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಇದೀಗ ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಕಾರಣಕ್ಕೂ ಅನರ್ಹ ಶಾಸಕರಿಗೆ ಟಿಕೆಟ್ ಕೊಡಬಾರದು ಎಂಬ ಒತ್ತಾಯವನ್ನೂ ಮುಖಂಡರು ಹೇರಿದ್ದಾರೆ. ಮಹಾಲಕ್ಷ್ಮಿ ಲೇಔಟ್‌ನಲ್ಲಿ ಗೋಪಾಲಯ್ಯ ಸ್ಪರ್ಧೆಗೆ ಬಿಜೆಪಿಯಲ್ಲಿಯೇ ತೀವ್ರ ವಿರೋಧ ವ್ಯಕ್ತವಾಗಿದೆ. ಅನರ್ಹರು ಮಾತ್ರವಲ್ಲದೆ ಅವರ ಕುಟುಂಬದವರಿಗೂ ಟಿಕೆಟ್ ನೀಡಬಾರದು ಎಂಬ ಒತ್ತಾಯವೂ ಕೇಳಿ ಬಂದಿದೆ. ಮಾಜಿ ಡೆಪ್ಯೂಟಿ ಮೇಯರ್ ರಮೇಶ್ ಅವರಿಂದ ನಾಮಪತ್ರ ಸಲ್ಲಿಸಲು ಸಿದ್ಧತೆಗಳು ನಡೆದಿದೆ. ಮಹಾಲಕ್ಷ್ಮೀ ಲೇಔಟ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ. ಬಿಜೆಪಿ ಟಿಕೆಟ್ ಕೊಡಿ, ಇಲ್ಲಾಂದ್ರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸೋದಾಗಿ ಅವರು ಹೇಳಿದ್ದಾರೆ.

Video Top Stories