ಬಿಜೆಪಿಯ ಹಪಾಹಪಿ ಪ್ರಜಾಪ್ರಭುತ್ವಕ್ಕೆ ಮಾರಕ: ಸಿದ್ದರಾಮಯ್ಯ!
ರಾಜ್ಯ ಮೈತ್ರಿ ಸರ್ಕಾರ ಪತನಕ್ಕೆ ಬಿಜೆಪಿಯ ಅಧಿಕಾರದ ಹಪಾಹಪಿಯೇ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಬೆಂಗಳೂರು(ಜು.23): ರಾಜ್ಯ ಮೈತ್ರಿ ಸರ್ಕಾರ ಪತನಕ್ಕೆ ಬಿಜೆಪಿಯ ಅಧಿಕಾರದ ಹಪಾಹಪಿಯೇ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ನಡೆದ ವಿಶ್ವಾಸಮತ ಯಾಚನೆಯಲ್ಲಿ ಮೈತ್ರಿ ಸರ್ಕಾರಕ್ಕೆ ಸೋಲಾದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ವಾಮಮಾರ್ಗದಿಂದ ಬಿಜೆಪಿ ಸರ್ಕಾರವನ್ನು ಕೆಡವಿದ್ದು, ಅವರು ಸರ್ಕಾರ ರಚನೆ ಅಷ್ಟು ಸುಲಭವಲ್ಲ ಎಂದು ಅಭಿಪ್ರಾಯಪಟ್ಟರು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..