ಸಿದ್ರಾಮಯರನ್ನ ಸೈಡ್ ಲೈನ್ ಮಾಡಲು ಖರ್ಗೆ ಭೇಟಿ ಮಾಡಿದ್ರಾ ಕುಮಾರಸ್ವಾಮಿ..?
ಮೈತ್ರಿ ಸರ್ಕಾರಕ್ಕೆ ಕಂಟಕ ಎದುರಾದಗೆಲ್ಲ ಸಿದ್ದರಾಮಯ್ಯನವರ ಮೊರೆ ಹೋಗುತ್ತಿದ್ದ ಸಿಎಂ ಕುಮಾರಸ್ವಾಮಿ, ಇಂದು [ಬುಧವಾರ] ಅಚ್ಚರಿಯ ಬೆಳವಣಿಗೆಯೊಂದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು.
ಬೆಂಗಳೂರು, [ಜೂ.19]: ಮೈತ್ರಿ ಸರ್ಕಾರಕ್ಕೆ ಕಂಟಕ ಎದುರಾದಗೆಲ್ಲ ಸಿದ್ದರಾಮಯ್ಯನವರ ಮೊರೆ ಹೋಗುತ್ತಿದ್ದ ಸಿಎಂ ಕುಮಾರಸ್ವಾಮಿ, ಇಂದು [ಬುಧವಾರ] ಅಚ್ಚರಿಯ ಬೆಳವಣಿಗೆಯೊಂದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು.
ಅತ್ತ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರೆ, ಇತ್ತ ಬೆಂಗಳೂರಿನಲ್ಲಿ ಕುಮಾರಸ್ವಾಮಿ ಅವರು ಖರ್ಗೆ ಅವರ ಮನೆಗೆ ತೆರಳಿ ಸುಮಾರು ಒಂದೂವರೆ ಗಂಟೆಗಳ ಕಾಲ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು, ಭಾರೀ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.