Asianet Suvarna News Asianet Suvarna News

ಸಾಹುಕಾರರು ಎನ್ನುತ್ತಲೇ ಸತೀಶ್ ಜಾರಕಿಹೊಳಿಗೆ ಡಿಕೆಶಿ ಡಿಚ್ಚಿ..!

ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಅರಣ್ಯ ಸಚಿವ ರಮೇಶ್ ಜಾರಕಿಹೊಳಿ ನಡುವಿನ ಮತ್ತೆ ಮುಸುಕಿನ ಗುದ್ದಾಟ ತಾರಕಕ್ಕೇರಿದೆ.

ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಅರಣ್ಯ ಸಚಿವ ರಮೇಶ್ ಜಾರಕಿಹೊಳಿ ನಡುವಿನ ಮತ್ತೆ ಮುಸುಕಿನ ಗುದ್ದಾಟ ತಾರಕಕ್ಕೇರಿದೆ. ಬೆಳಗಾವಿ, ಬಳ್ಳಾರಿ ನಂತರ ಇದೀಗ ಕುಂದಗೋಳ ವಿಧಾನಸಭಾ ಉಪಚುನಾವಣೆ ಸಂಬಂಧ ಇಬ್ಬರ ನಡುವೆ ಕಿತ್ತಾಟ ಆರಂಭವಾಗಿದೆ. ಕುಂದಗೋಳ ಉಪಚುನಾವಣೆ ಉಸ್ತುವಾರಿಯನ್ನು ಡಿಕೆಶಿಗೆ ವಹಿಸಲಾಗಿದೆ. ಇದ್ರಿಂದ ಸತೀಶ್ ಜಾರಕಿಹೊಳಿ ಸಾಹುಕಾರ ಕೆಂಡಾಮಂಡಲರಾಗಿದ್ದಾರೆ. ಇದಕ್ಕೆ ಡಿಕೆಶಿ ಸತೀಶ್ ಜಾರಕಿಹೊಳಿ ಅವರನ್ನು ಸಾಹುಕಾರ ಎನ್ನುತ್ತಲೇ ಟಾಂಗ್ ಕೊಟ್ಟಿದ್ದಾರೆ.