Asianet Suvarna News Asianet Suvarna News

ಬೆಲೆ ಇಲ್ಲ: ಮೈತ್ರಿ ಸರ್ಕಾರದ ವಿರುದ್ಧ ಮತ್ತೊಬ್ಬ ಶಾಸಕ ಅಸಮಾಧಾನ

ಮೈತ್ರಿ ಸರ್ಕಾರದ ವಿರುದ್ಧ ಮತ್ತೊಬ್ಬ ಶಾಸಕ ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ಶಾಸಕರಿಗೆ ಬೆಲೆ ಇಲ್ಲ ಎಂದು ಅವರು ನೋವು ತೋಡಿಕೊಂಡಿದ್ದಾರೆ. 

ಮೈಸೂರು (ಜು.02): ಆನಂದ್ ಸಿಂಗ್ ರಾಜೀನಾಮೆ ಬೆನ್ನಲ್ಲೇ ಮೈತ್ರಿ ಸರ್ಕಾರದ ವಿರುದ್ಧ ಮತ್ತೊಬ್ಬ ಶಾಸಕ ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ಶಾಸಕರಿಗೆ ಬೆಲೆ ಇಲ್ಲ ಎಂದು ಅವರು ನೋವು ತೋಡಿಕೊಂಡಿದ್ದಾರೆ. 

ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಮಾಜಿ ಸಚಿವ ತನ್ವೀರ್ ಸೇಠ್, ತಾನು ಕೂಡಾ ಸಚಿವ ಸ್ಥಾನದ ಆಕಾಂಕ್ಷಿ, ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಕಡೆಗಣಿಸುತ್ತಿದೆ ಎಂದರು. 

ಇತ್ತೀಚೆಗೆ ಇನ್ನೊಬ್ಬ ಮುಸ್ಲಿಮ್ ಶಾಸಕ ರೋಷನ್ ಬೇಗ್ ಕೂಡಾ ಇಂತಹದ್ದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ನಂತರದ ಬೆಳವಣಿಗೆಯಲ್ಲಿ ರೋಷನ್ ಬೇಗ್‌ರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಈಗ ಸೇಠ್ ಕೂಡಾ ಬೇಗ್ ರಾಗವನ್ನು ಹಾಡುತ್ತಿರುವುದು ಕುತೂಹಲ ಹುಟ್ಟುಹಾಕಿದೆ.

 

Video Top Stories