Asianet Suvarna News Asianet Suvarna News

‘ಟಾರ್ಗೆಟ್’ ಬದಲಿಸಿದ ವಿಶ್ವನಾಥ್! ಹಕ್ಕಿ ಕಣ್ಣು ಯಾರ ಮ್ಯಾಗೆ?

ಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಯಲ್ಲಿ ಬೀಡು ಬಿಟ್ಟಿರುವ ಎಚ್. ವಿಶ್ವನಾಥ್; ರಾಜ್ಯದಲ್ಲಿ ರಾಜಕೀಯ ಅರಾಜಕತೆ ಇದೆ ಎಂದ ಶಾಸಕ; ಗೂಡು ಬದಲಿಸುವ ಯೋಚನೆಯಲ್ಲಿ ಹಳ್ಳಿ ಹಕ್ಕಿ?

ನವದೆಹಲಿ (ಜು.03): ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಎಚ್. ವಿಶ್ವನಾಥ್ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇಲ್ಲಿ ಬಿಜೆಪಿ ನಾಯಕರನ್ನೂ ವಿಶ್ವನಾಥ್ ಭೇಟಿಯಾಗಿದ್ದಾರೆ. 

ಸಾಮಾನ್ಯವಾಗಿ ಸಿದ್ದರಾಮಯ್ಯಗೆ ಕುಟುಕುವ ವಿಶ್ವನಾಥ್, ಇಂದು ಪತ್ರಕರ್ತರೊಂದಿಗೆ ಮಾತನಾಡುವಾಗ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧವೂ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ರಾಜಕೀಯ ಅರಾಜಕತೆ ಇದೆ, ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸರ್ಕಾರವನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಎಂದರು.