RSS ಕೆಣಕಿದ್ದ ರಾಹುಲ್ ಗಾಂಧಿ ತಪ್ಪಿತಸ್ಥ ಅಲ್ಲ ಎಂದ ಕೋರ್ಟ್!
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಆರ್ಎಸ್ಎಸ್ ಕೈವಾಡವಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮುಂಬೈ ನ್ಯಾಯಾಲಯದಿಂದ ಬಿಗ್ ರಿಲೀಫ್ ಸಿಕ್ಕಿದೆ.
ಮುಂಬೈ(ಜು.04): ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಆರ್ಎಸ್ಎಸ್ ಕೈವಾಡವಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮುಂಬೈ ನ್ಯಾಯಾಲಯದಿಂದ ಬಿಗ್ ರಿಲೀಫ್ ಸಿಕ್ಕಿದೆ. ಯಾವುದೇ ಪುರಾವೆಯಿಲ್ಲದೇ ರಾಹುಲ್ ಗಾಂಧಿ ಆರ್ಎಸ್ಎಸ್ ಮೇಲೆ ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಆದರೆ ಈ ಅರ್ಜಿಯನ್ನು ತಿರಸ್ಕಿರಿಸಿರುವ ಮುಂಬೈ ಶಿವಡಿ ಬನ್ಯಾಯಾಲಯ, ರಾಹುಲ್ ಯಾವುದೇ ತಪ್ಪು ಮಾಡಿಲ್ಲ ಎಂದು ತೀರ್ಪು ನೀಡಿದೆ. ಇನ್ನು ತೀರ್ಪನ್ನು ಸ್ವಾಗತಿಸಿರುವ ರಾಹುಲ್ ಗಾಂಧಿ, ಇನ್ನು ಮುಂದೆ ಆರ್ಎಸ್ಎಸ್ ಮತ್ತು ಬಿಜೆಪಿ ವಿರುದ್ಧದ ತಮ್ಮ ಹೋರಾಟ 10 ಪಟ್ಟು ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...