ಡಿಕೆಶಿ ಪರ ಒಕ್ಕಲಿಗರ ರ್ಯಾಲಿ: ರಸ್ತೆಯುದ್ದಕ್ಕೂ ಭರ್ಜರಿ ಬಾಡೂಟ ವ್ಯವಸ್ಥೆ!
ಇಡಿ ಪ್ರಕರಣದಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಒಕ್ಕಲಿಗರ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಹೊರ ಜಿಲ್ಲೆಗಳಿಂದ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಮಂದಿ ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದು, ಬೆಂಗಳೂರಿನಲ್ಲಿ ಜನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹೀಗಿರುವಾಗ ಈ ಬೃಹತ್ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಪ್ರತಿಭಟನಾಕಾರರಿಗೆ ಬಾಡೂಟದ ವ್ಯವಸ್ಥೆ ಮಾಡಲಾಗಿದ್ದು, ಬಸ್ ನಿಲ್ಲಿಸಿ ರಸ್ತೆಯುದ್ದಕ್ಕೂ ಬಿರಿಯಾನಿ ಹಂಚಲಾಗಿದೆ.
ಕನಕಪುರ[ಸೆ.11]: ಇಡಿ ಪ್ರಕರಣದಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಒಕ್ಕಲಿಗರ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಹೊರ ಜಿಲ್ಲೆಗಳಿಂದ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಮಂದಿ ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದು, ಬೆಂಗಳೂರಿನಲ್ಲಿ ಜನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹೀಗಿರುವಾಗ ಈ ಬೃಹತ್ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಪ್ರತಿಭಟನಾಕಾರರಿಗೆ ಬಾಡೂಟದ ವ್ಯವಸ್ಥೆ ಮಾಡಲಾಗಿದ್ದು, ಬಸ್ ನಿಲ್ಲಿಸಿ ರಸ್ತೆಯುದ್ದಕ್ಕೂ ಬಿರಿಯಾನಿ ಹಂಚಲಾಗಿದೆ.