Asianet Suvarna News Asianet Suvarna News

ಬಳ್ಳಾರಿ÷2 ವಿಚಾರ: ಆರೋಗ್ಯ ಸಚಿವ ಶ್ರೀರಾಮುಲು U ಟರ್ನ್?

ಬಳ್ಳಾರಿ ವಿಭಜನೆ ವಿಚಾರ ಬಿಜೆಪಿ ಪಾಳೆಯದಲ್ಲಿ ಆಂತರಿಕ ಸಂಘರ್ಷವನ್ನು ಹುಟ್ಟುಹಾಕಿದೆ. ಬಿ.ಎಸ್. ಯಡಿಯೂರಪ್ಪ ನಿರ್ಧಾರದ ವಿರುದ್ಧ ಶಾಸಕ ಸೋಮಶೇಖರ್ ರೆಡ್ಡಿ ಗುಡುಗಿದ್ದಾರೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು ಈ ವಿಚಾರವಾಗಿ ಪ್ರತಿಕ್ರಿಯಿಸಿದರು. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ... 

ಉಡುಪಿ (ಸೆ.28): ಬಳ್ಳಾರಿ ವಿಭಜನೆ ವಿಚಾರ ಬಿಜೆಪಿ ಪಾಳೆಯದಲ್ಲಿ ಆಂತರಿಕ ಸಂಘರ್ಷವನ್ನು ಹುಟ್ಟುಹಾಕಿದೆ. ಬಿ.ಎಸ್. ಯಡಿಯೂರಪ್ಪ ನಿರ್ಧಾರದ ವಿರುದ್ಧ ಶಾಸಕ ಸೋಮಶೇಖರ್ ರೆಡ್ಡಿ ಗುಡುಗಿದ್ದಾರೆ.

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಪ್ರತ್ಯೇಕ ವಿಜಯನಗರ ಜಿಲ್ಲೆಯ ರಚನೆಗಾಗಿ ವಿಜಯನಗರ ಕ್ಷೇತ್ರದ ಅನರ್ಹ ಶಾಸಕ ಆನಂದ್ ಸಿಂಗ್ ಸಿಎಂ ಬಿ.ಎಸ್. ಯಡಿಯೂರಪ್ಪ ಮೇಲೆ ಒತ್ತಡ ಹೇರುತ್ತಿದ್ದಾರೆ. ಇನ್ನೊಂದು ಕಡೆ ಶ್ರೀರಾಮುಲು ಮತ್ತು ಸೋಮಶೇಖರ್ ರೆಡ್ಡಿ ಆ ಪ್ರಸ್ತಾವವನ್ನು ವಿರೋಧಿಸುತ್ತಿದ್ದಾರೆ.   

ಸುವರ್ಣನ್ಯೂಸ್ ಜೊತೆ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು ಈ ವಿಚಾರವಾಗಿ ಪ್ರತಿಕ್ರಿಯಿಸಿದರು. ತಮ್ಮ ಹಿಂದಿನ ನಿಲುವನ್ನು ಸಡಿಲಿಸಿದ್ದಾರಾ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ.ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...