‘ಮುಖ್ಯಮಂತ್ರಿಗಳೇ, ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೋ? ಬರ-ಪ್ರವಾಹ ನಿರ್ವಹಣೆಯದ್ದೋ?’
ಒಂದು ಕಡೆ ಬರ, ಇನ್ನೊಂದು ಕಡೆ ಪ್ರವಾಹ ಭೀತಿ. ಆದರೆ ಅದನ್ನು ನಿರ್ವಹಿಸಲು ಸಚಿವರೇ ಇಲ್ಲ, ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ವಿರುದ್ಧ ಸರಣಿ ಟ್ವೀಟ್ಗಳ ಮೂಲಕ ಸಿಟ್ಟನ್ನು ಹೊರ ಹಾಕಿದ್ದಾರೆ.
ಬೆಂಗಳೂರು (ಆ.03): ಒಂದು ಕಡೆ ಬರ, ಇನ್ನೊಂದು ಕಡೆ ಪ್ರವಾಹ ಭೀತಿ. ಆದರೆ ಅದನ್ನು ನಿರ್ವಹಿಸಲು ಸಚಿವರೇ ಇಲ್ಲ, ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ವಿರುದ್ಧ ಸರಣಿ ಟ್ವೀಟ್ಗಳ ಮೂಲಕ ಸಿಟ್ಟನ್ನು ಹೊರ ಹಾಕಿದ್ದಾರೆ.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು @BSYBJP ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ?@INCKarnataka
— Siddaramaiah (@siddaramaiah) August 3, 2019
1/3
ಅತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ,ಕೃಷಿ,ಗ್ರಾಮೀಣ ಅಭಿವೃದ್ದಿ ಇಲಾಖೆಗಳಿಗೆ ಸಚಿವರೇ ಇಲ್ಲ.
— Siddaramaiah (@siddaramaiah) August 3, 2019
ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ?
ಸಂಪುಟ ವಿಸ್ತರಣೆಯದ್ದೇ?@INCKarnataka
2/3
ಅತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ,ಕೃಷಿ,ಗ್ರಾಮೀಣ ಅಭಿವೃದ್ದಿ ಇಲಾಖೆಗಳಿಗೆ ಸಚಿವರೇ ಇಲ್ಲ.
— Siddaramaiah (@siddaramaiah) August 3, 2019
ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ?
ಸಂಪುಟ ವಿಸ್ತರಣೆಯದ್ದೇ?@INCKarnataka
2/3
ವಿಶ್ವಾಸ ಮತಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ?@INCKarnataka
— Siddaramaiah (@siddaramaiah) August 3, 2019
3/3