‘ಮೋದಿ- ಶಾ ಕಂಡ್ರೆ ಬಿಎಸ್ವೈ ಗಡಗಡ, ಪರಿಹಾರಕ್ಕೆ ಆಗ್ರಹಿಸಿಯೇ ಇಲ್ಲ!’
ಬಿ.ಎಸ್. ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರಿಗೆ ನರೇಂದ್ರ ಮೋದಿ- ಅಮಿತ್ ಶಾರನ್ನು ಕಂಡ್ರೆ ಭಯ. ಆದುದರಿಂದ ಪರಿಹಾರ ಬಿಡುಗಡೆ ಮಾಡಿ ಎಂದು ಆಗ್ರಹಿಸಿಯೇ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಒಂದು ವೇಳೆ ಪರಿಹಾರಕ್ಕೆ ಆಗ್ರಹಿಸಿದ್ದರೆ, ಎಷ್ಟು ಹಣ ಕೇಳಿದ್ದಾರೆ ಎಂದು ಯಡಿಯೂರಪ್ಪ ಬಹಿರಂಗಪಡಿಸಲಿ ಎಂದು ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.
ಬೆಂಗಳೂರು (ಆ.19): ಬಿ.ಎಸ್. ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರಿಗೆ ನರೇಂದ್ರ ಮೋದಿ- ಅಮಿತ್ ಶಾರನ್ನು ಕಂಡ್ರೆ ಭಯ. ಆದುದರಿಂದ ಪರಿಹಾರ ಬಿಡುಗಡೆ ಮಾಡಿ ಎಂದು ಆಗ್ರಹಿಸಿಯೇ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಒಂದು ವೇಳೆ ಪರಿಹಾರಕ್ಕೆ ಆಗ್ರಹಿಸಿದ್ದರೆ, ಎಷ್ಟು ಹಣ ಕೇಳಿದ್ದಾರೆ ಎಂದು ಯಡಿಯೂರಪ್ಪ ಬಹಿರಂಗಪಡಿಸಲಿ ಎಂದು ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.