‘ಬೆಂಗಳೂರಿಗೂ ಏನೂ ಕೊಟ್ಟಿಲ್ಲ, ಇದೆಂಥಾ ಬಜೆಟ್ ಗೊತ್ತಿಲ್ಲ!’
ಮೋದಿ ಸರ್ಕಾರ-2.0ನ ಮೊದಲ ಬಜೆಟನ್ನು ಪ್ರತಿಪಕ್ಷಗಳು ಕಟುವಾಗಿ ಟೀಕಿಸಿವೆ. ಬೆಂಗಳೂರಿನಂತಹ ಪ್ರಮುಖ ನಗರಗಳನ್ನು ಬಜೆಟ್ನಲ್ಲಿ ಕಡೆಗಣಿಸಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು (ಜು.05): ಮೋದಿ ಸರ್ಕಾರ-2.0ನ ಮೊದಲ ಬಜೆಟನ್ನು ಪ್ರತಿಪಕ್ಷಗಳು ಕಟುವಾಗಿ ಟೀಕಿಸಿವೆ. ಬೆಂಗಳೂರಿನಂತಹ ಪ್ರಮುಖ ನಗರಗಳನ್ನು ಬಜೆಟ್ನಲ್ಲಿ ಕಡೆಗಣಿಸಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕಿದ್ದಾರೆ.
ದೇಶದ ಪ್ರಗತಿ ಬಹುಮುಖ್ಯ ಕೊಡುಗೆ ನೀಡುತ್ತಿರುವ ಬೆಂಗಳೂರಿಗೂ ಏನೂ ಕೊಟ್ಟಿಲ್ಲ. ಸಾಮಾಜಿಕ ನ್ಯಾಯವನ್ನೂ ಬಜೆಟ್ ನಲ್ಲಿ ಕಡೆಗಣಿಸಲಾಗಿದೆ ಎಂದು ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಾ. ಪರಮೇಶ್ವರ್ ಹೇಳಿದರು.