‘ಅತೃಪ್ತರಿಗೆ ಧಮ್‌ ಇಲ್ಲ, ಗಂಡಸ್ತನವಿದ್ರೆ ಸದನಕ್ಕೆ ಬಂದು ಮತ ಹಾಕ್ಬೇಕಿತ್ತು ’

ಮಾಜಿ ಶಾಸಕ ಆನಂದ್ ಆಸ್ನೋಟಿಕರ್ ನಾಲಿಗೆ ಹರಿಬಿಟ್ಟಿದ್ದಾರೆ. ಅತೃಪ್ತ ಶಾಸಕರು ಗಂಡಸ್ತನ‌ ‌ಇದ್ದರೆ ಸದನಕ್ಕೆ ಬಂದು ವಿರುದ್ದ ಮತ ಹಾಕಬೇಕಿತ್ತು.  ಅದು ಬಿಟ್ಟು ನಪುಂಸಕರ ರೀತಿಯಲ್ಲಿ ಮುಂಬೈನಲ್ಲಿ ಕುಳಿತಿದ್ದೇಕೆ..?  ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ಮಾಡಿದ್ದಾರೆ.  ಕಾರವಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಸ್ನೋಟಿಕರ್ ಸುಪ್ರೀಂಕೋರ್ಟ್‌ನಲ್ಲಿ ಶಾಸಕರ ಅನರ್ಹತೆ ತಡೆ ಹಿಡಿಯುವ ಸಾಧ್ಯತೆ ಕಡಿಮೆಯಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಮ್ಮನ್ನ ಅನರ್ಹ ಮಾಡಲಾಗಿತ್ತು. ಆಗ ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದೆವು. ನೋಟಿಸ್ ನೀಡದೆ ಅನರ್ಹತೆ ಮಾಡಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ನಮ್ಮ ಅನರ್ಹತೆ ರದ್ದಾಗಿತ್ತು. 20 ದಿನಗಳ‌ ಕಾಲ ಅನರ್ಹ ಶಾಸಕರ ರಾಜಕೀಯವನ್ನ ರಾಜ್ಯದ ಜನತೆ ನೋಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ಮಾಜಿ ಶಾಸಕ ಆನಂದ್ ಆಸ್ನೋಟಿಕರ್ ನಾಲಿಗೆ ಹರಿಬಿಟ್ಟಿದ್ದಾರೆ. ಅತೃಪ್ತ ಶಾಸಕರು ಗಂಡಸ್ತನ‌ ‌ಇದ್ದರೆ ಸದನಕ್ಕೆ ಬಂದು ವಿರುದ್ದ ಮತ ಹಾಕಬೇಕಿತ್ತು. ಅದು ಬಿಟ್ಟು ನಪುಂಸಕರ ರೀತಿಯಲ್ಲಿ ಮುಂಬೈನಲ್ಲಿ ಕುಳಿತಿದ್ದೇಕೆ..? ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ಮಾಡಿದ್ದಾರೆ. ಕಾರವಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಸ್ನೋಟಿಕರ್ ಸುಪ್ರೀಂಕೋರ್ಟ್‌ನಲ್ಲಿ ಶಾಸಕರ ಅನರ್ಹತೆ ತಡೆ ಹಿಡಿಯುವ ಸಾಧ್ಯತೆ ಕಡಿಮೆಯಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಮ್ಮನ್ನ ಅನರ್ಹ ಮಾಡಲಾಗಿತ್ತು. ಆಗ ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದೆವು. ನೋಟಿಸ್ ನೀಡದೆ ಅನರ್ಹತೆ ಮಾಡಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ನಮ್ಮ ಅನರ್ಹತೆ ರದ್ದಾಗಿತ್ತು. 20 ದಿನಗಳ‌ ಕಾಲ ಅನರ್ಹ ಶಾಸಕರ ರಾಜಕೀಯವನ್ನ ರಾಜ್ಯದ ಜನತೆ ನೋಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ. 

Add Asianetnews Kannada as a Preferred SourcegooglePreferred

Related Video