
Today Horoscope: ಮೇಷ ರಾಶಿಯವರ ಆರೋಗ್ಯದಲ್ಲಿ ಏರುಪೇರು ಆಗಲಿದ್ದು, ಲಲಿತಾ ಪ್ರಾರ್ಥನೆ ಮಾಡಿ
ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಅಧಿಕ ಶ್ರಾವಣ ಮಾಸ, ಕೃಷ್ಣ ಪಕ್ಷ, ಭಾನುವಾರ, ಪಂಚಮಿ ತಿಥಿ, ಉತ್ತರಾಭಾದ್ರ ನಕ್ಷತ್ರ.
Add Asianetnews Kannada as a Preferred Source

ಪಂಚಮಿ ತಿಥಿ ತುಂಬಾ ಶ್ರೇಷ್ಠವಾಗಿದ್ದು, ಈ ದಿನ ಲಲಿತಾ ಸಹಸ್ರನಾಮ ಪಠಣ ಮಾಡಿ. ಇದು ಮನುಷ್ಯನ ಅಂತರಂಗ ಮತ್ತು ಬಹಿರಂಗ ಶುದ್ಧತೆಗೆ ಉತ್ತಮವಾಗಿದೆ. ಈ ದಿನ ಮೇಷ ರಾಶಿಯವರ ಆರೋಗ್ಯದಲ್ಲಿ ಏರುಪೇರು ಆಗಲಿದೆ. ಸ್ತ್ರೀಯರಿಗೆ ವ್ಯಯವಾಗಲಿದೆ. ಲಲಿತಾ ಪ್ರಾರ್ಥನೆ ಮಾಡಿ. ಈ ದಿನ ಮಿಥುನ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲವಿದ್ದು, ದಾಂಪತ್ಯದಲ್ಲಿ ಅಸಮಾಧಾನವಿರಲಿದೆ. ಲಕ್ಷ್ಮೀನಾರಾಯಣ ಹೃದಯ ಪಠಿಸಿ.
ಇದನ್ನೂ ವೀಕ್ಷಿಸಿ: ನ್ಯೂಸ್ ಅವರ್ ಸ್ಪೆಶಲ್ನಲ್ಲಿ ಸಿ.ಟಿ.ರವಿ: ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಹೇಳಿದ್ದೇನು?