Today Horoscope: ಈ ರಾಶಿಯವರು ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಿ..ಆದಿತ್ಯ ಹೃದಯ ಪಠಿಸಿ

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
 

Share this Video
  • FB
  • Linkdin
  • Whatsapp

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ಶರದ್‌ ಋತು, ಆಶ್ವೀಜ ಮಾಸ, ಕೃಷ್ಣ ಪಕ್ಷ, ಶುಕ್ರವಾರ, ಷಷ್ಠಿ ತಿಥಿ, ಆರಿದ್ರಾ ನಕ್ಷತ್ರ.

ಇಂದು ಷಷ್ಠಿ ತಿಥಿ ಇರುವುದರಿಂದ ಸುಬ್ರಹ್ಮಣ್ಯ ಸ್ವಾಮಿಯ ಕಾಲವನ್ನು ಸೂಚಿಸಿಸುತ್ತದೆ. ಈ ದಿನ ಶಿವ, ಪಾರ್ತತಿ ಸಹಿತ ಇರುವ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಹೋದ್ರೆ ಒಳಿತಾಗಲಿದೆ. ಮಕರ ರಾಶಿಯವರಿಗೆ ಈ ದಿನ ವೃತ್ತಿಯಲ್ಲಿ ತೊಡಕಾಗಲಿದೆ. ಕಾರ್ಯಗಳು ಅಪೂರ್ಣವಾಗಲಿವೆ. ವ್ಯಾಪಾರಿಗಳಿಗೆ ಲಾಭ ದೊರೆಯಲಿದ್ದು, ಕುಟುಂಬದಲ್ಲಿ ಬಲವಿರಲಿದೆ. ಹಿರಿಯರ ಸಹಕಾರವಿರಲಿದೆ. ಈ ರಾಶಿಯವರು ಇಂದು ಮಹಾಲಕ್ಷ್ಮೀ ಸನ್ನಿಧಾನಕ್ಕೆ ಗೋಧಿ-ಅವರೆ ದಾನ ಮಾಡಿ.

ಇದನ್ನೂ ವೀಕ್ಷಿಸಿ: ಮರಾಠ ನೆಲದಲ್ಲಿ "ಕನ್ನಡ ಡಿಂಡಿಮ" ಬಾರಿಸಿದ್ದ ಹೆಮ್ಮೆಯ ಕನ್ನಡಿಗ..!

Related Video