
Today Horoscope: ಪ್ರದೋಷ ಪೂಜೆಯನ್ನು ಏಕೆ ಮಾಡಬೇಕು ? ಇದರಿಂದ ದೊರೆಯುವ ಫಲವೇನು ?
ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಆಶ್ವೀಜ ಮಾಸ, ಶುಕ್ಲ ಪಕ್ಷ, ಗುರುವಾರ, ದ್ವಾದಶಿ-ತ್ರಯೋದಶಿ ತಿಥಿ, ಪೂರ್ವಾಭಾದ್ರ ನಕ್ಷತ್ರ.
Add Asianetnews Kannada as a Preferred Source

ದ್ವಿದಳ ಧಾನ್ಯ ವ್ರತ ಎಂದರೇ, ಮಳೆ ಬಂದು ಧಾನ್ಯಗಳು ಇನ್ನೂ ಕೈಗೆ ಸಿಕ್ಕಿರುವುದಿಲ್ಲ. ಹಾಗಾಗಿ ಈ ಸಮಯದಲ್ಲಿ ಧಾನ್ಯಗಳ ಅಭಾವ ಇರುತ್ತದೆ. ಹಾಗಾಗಿ ಈ ದಿನದಿಂದ ಧಾನ್ಯಗಳನ್ನು ಬಿಟ್ಟು ಬೇರೆ ರೀತಿಯಾಗಿ ಆಹಾರವನ್ನು ತಯಾರಿಸಲಾಗುತ್ತದೆ. ಜೊತೆಗೆ ಪ್ರದೋಷ ಪೂಜೆಯನ್ನು ಮಾಡಲಾಗುತ್ತದೆ. ಪ್ರದೋಷ ವ್ರತವನ್ನು ತ್ರಯೋದಶಿ ವ್ರತ ಎಂದೂ ಕರೆಯುತ್ತಾರೆ.
ಇದನ್ನೂ ವೀಕ್ಷಿಸಿ: News Hour: ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದ ಆಪರೇಷನ್ ಹುಲಿ ಉಗುರು!