
Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ ? ಇಂದು ಅಮ್ಮನವರಿಗೆ ತುಪ್ಪದ ದೀಪ ಹಚ್ಚಿ
ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಆಶ್ವೀಜ ಮಾಸ, ಶುಕ್ಲ ಪಕ್ಷ, ಶುಕ್ರವಾರ, ಚತುರ್ದಶಿ ತಿಥಿ, ಉತ್ತರಾಭಾದ್ರ ನಕ್ಷತ್ರ.
Add Asianetnews Kannada as a Preferred Source

ಶುಕ್ಲ ಪಕ್ಷದ ಚತುರ್ದಶಿ ಅಮ್ಮನವರ ಪ್ರಾರ್ಥನೆಗೆ ತುಂಬಾ ಒಳ್ಳೆಯದು. ಹೀಗಾಗಿ ಅಮ್ಮನವರಿಗೆ ತುಪ್ಪದ ದೀಪವನ್ನು ಹಚ್ಚಿ. ಈ ದಿನ ವೃಷಭ ರಾಶಿಯವರಿಗೆ ಶುಭ ವರ್ತಮಾನ ಬರಲಿದೆ. ವೃತ್ತಿಯಲ್ಲಿ ಅನುಕೂಲವಿದ್ದು, ಶತ್ರುಗಳ ಬಾಧೆ ಕಾಡಲಿದೆ. ಸಂಗಾತಿ ಜೊತೆ ಮನಸ್ತಾಪ ಬರಲಿದೆ. ಲಕ್ಷ್ಮೀನಾರಾಯಣ ಹೃದಯ ಪಠಿಸಿ. ಮಿಥುನ ರಾಶಿಯವರು ದೇವರ ಕೆಲಸಗಳಲ್ಲಿ ತೊಡಗುವಿರಿ. ಮಕ್ಕಳಿಂದ ಬೇಸರವಾಗಲಿದ್ದು, ಪೆಟ್ಟು ಬೀಳುವ ಸಾಧ್ಯತೆ ಇದೆ. ಈ ರಾಶಿಯವರು ಇಂದು ಸುಬ್ರಹ್ಮಣ್ಯ ಕವಚ ಪಠಿಸಿ.
ಇದನ್ನೂ ವೀಕ್ಷಿಸಿ: ಕರ್ನಾಟಕ ಅರಣ್ಯ ಇಲಾಖೆ ಬಡವರ ಮುಂದೆ ಹುಲಿ, ಸೆಲೆಬ್ರಿಟಿ-ರಾಜಕಾರಣಿಗಳ ಮುಂದೆ ಇಲಿ!