
Today Horoscope: ಮೇಷದಿಂದ ಮೀನ- ಯಾವ ರಾಶಿಯವರಿಗೆ ಏನುಫಲ ? ನೀವು ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳೇನು ?
ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ನಿಜ ಶ್ರಾವಣ ಮಾಸ, ಕೃಷ್ಣ ಪಕ್ಷ, ಮಂಗಳವಾರ, ಚತುರ್ದಶಿ ತಿಥಿ, ಮಖಾ ನಕ್ಷತ್ರ.
Add Asianetnews Kannada as a Preferred Source

ಕೃಷ್ಣ ಪಕ್ಷದ ಕೊನೆ ದಿನದಲ್ಲಿ ಇದ್ದೇವೆ. ಇಂದು ಮತ್ತು ನಾಳೆ ನೀವು ಪೂರ್ವಜರ ಪ್ರಾರ್ಥನೆ ಮಾಡಿ. ಜೊತೆಗೆ ಈಶ್ವರನ ಆರಾಧನೆ ಮಾಡಬಹುದು. ಹರಿ-ಹರರ ಪ್ರಾರ್ಥನೆಯಿಂದ ನಿಮ್ಮ ಎಲ್ಲಾ ಕಷ್ಟಗಳು ದೂರವಾಗುತ್ತವೆ. ಈ ದಿನ ಕರ್ಕಟಕ ರಾಶಿಯವರಿಗೆ ಹಣಕಾಸಿನ ತೊಂದರೆ ಹಾಗೂ ಕುಟುಂಬದಲ್ಲಿ ವಾಗ್ವಾದ ಬರಲಿದೆ. ಮಕ್ಕಳ ವಿಚಾರದಲ್ಲಿ ಅಸಮಾಧಾನ ಉಂಟಾಗಲಿದೆ. ವೃತ್ತಿಯಲ್ಲಿ ಪರಿಶ್ರಮ ಹೆಚ್ಚು, ಈ ದಿನ ಅಮ್ಮನವರಿಗೆ ಕ್ಷೀರಾಭಿಷೇಕ ಮಾಡಿಸಿ.
ಇದನ್ನೂ ವೀಕ್ಷಿಸಿ: ಜಸ್ಟಿನ್ ಟ್ರುಡೋಗೆ ಭಾರತದಲ್ಲಿ ಅವಮಾನ, ಕೆನಡಾದಲ್ಲಿ ವಿಪಕ್ಷಗಳ ಹೋರಾಟ