ಮೂರು ಪಕ್ಷ ಮೂರು ಯಾತ್ರೆ, ಮತದಾರರ ಓಲೈಕೆಗೆ ಪಕ್ಷಗಳ ಸರ್ಕಸ್‌!

ಚುನಾವಣೆ ಸಮೀಪವಾಗುತ್ತಿದ್ದಂತೆ ರಾಜ್ಯದಲ್ಲಿ ಯಾತ್ರೆ ಪಾಲಿಟಿಕ್ಸ್‌ ಜೋರಾಗಿದೆ. ಬಿಜೆಪಿ, ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳು ಮೂರು ಸಂಘಟನಾ ಯಾತ್ರೆಯನ್ನು ಆರಂಭಿಸಿವೆ. ಅದರೊಂದಿಗೆ ಡಿಸೆಂಬರ್‌ ವೇಳೆಗೆ ಇಲ್ಲಿನ ಚುನಾವಣಾ ಕಣ ರಂಗೇರುವುದು ಖಚಿತವಾಗಿದೆ.
 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 27): 2023ರ ಚುನಾವಣಾ ಅಖಾಡಕ್ಕೆ ವೇದಿಕೆ ಸಿದ್ಧವಾಗಿದೆ. ರಾಜ್ಯದ ಮೂರು ಪ್ರಧಾನ ರಾಜಕೀಯ ಪಕ್ಷಗಳು ಯಾತ್ರೆ ಪಾಲಿಟಿಕ್ಸ್ ಅಖಾಡಕ್ಕೆ ಇಳಿದಿವೆ. ಚುನಾವಣೆಗಾಗಿ ಯಾತ್ರೆ ಹೆಸರಲ್ಲಿ ನಾಯಕರ ಪ್ರಚಾರ. ಮೂರು ಪಕ್ಷಗಳಿಂದ ಮೂರು ಸಂಘಟನಾ ಯಾತ್ರೆ ಘೋಷಣೆಯಾಗಿದೆ.

ಇದರೊಂದಿಗೆ ಡಿಸೆಂಬರ್ ವೇಳೆಗೆ ಚುನಾವಣಾ ಕಣ ರಂಗೇರುವುದು ನಿಶ್ಚಿತವಾಗಿದೆ. ಜನಸಂಕಲ್ಪ ಯಾತ್ರೆ ಹೆಸರಲ್ಲಿ ಬಿಜೆಪಿ ಈಗಾಗಲೇ ಅಖಾಡಕ್ಕೆ ಇಳಿದಿದ್ದರೆ, ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆ ಮುಗಿಸಿರುವ ಕಾಂಗ್ರೆಸ್‌ ಈಗ ಮತ್ತೊಂದು ಯಾತ್ರೆ ಘೋಷಣೆ ಮಾಡಿದೆ. ಸಿದ್ದು, ಡಿಕೆಶಿ ಪ್ರತ್ಯೇಕ ಬಸ್ ಯಾತ್ರೆ ಮಾಡುವುದಾಗಿ ಘೋಷಿಸಿದ್ದಾರೆ. ಇದರ ನಡುವೆ ನವೆಂಬರ್ 1 ರಿಂದ ಜೆಡಿಎಸ್‌ನ ಪಂಚರತ್ನ ರಥಯಾತ್ರೆ ಘೋಷಣೆಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜೆಡಿಎಸ್ ಪಂಚರತ್ನ ಯಾತ್ರೆಗೆ ಸಿದ್ದಗೊಳಿಸಿರುವ ವಾಹನಗಳು ಹೇಗಿವೆ ಗೊತ್ತಾ?

ಇನ್ನು ನವೆಂಬರ್‌ 11 ಕ್ಕೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಅದಕ್ಕಾಗಿಯೂ ಬಿಜೆಪಿ ಭರದ ಸಿದ್ಧತೆ ನಡೆಸಿದೆ. ಸಮಾವೇಶದಲ್ಲಿ ಕನಿಷ್ಠ 3 ಲಕ್ಷ ಜನರನ್ನು ಸೇರಿಸಬೇಕು ಎನ್ನುವ ಪಣ ತೊಟ್ಟಿದೆ. ವಂದೇಭಾರತ್‌ ಎಕ್ಸ್‌ಪ್ರೆಸ್‌ ಉದ್ಘಾಟನೆ, ಕೆಂಪೇಗೌಡ ಪ್ರತಿಮೆ ಅನಾವರಣದಂಥ ಕಾರ್ಯಕ್ರಮಗಳು ಇದರಲ್ಲಿ ಸೇರಿವೆ.

Related Video