Asianet Suvarna News Asianet Suvarna News

5 ಗ್ಯಾರಂಟಿಗಳನ್ನು ಇಂದೇ ಜಾರಿಗೆ ತರುತ್ತೇವೆ: ನೂತನ ಸಿಎಂ ಘೋಷಣೆ

ಹಿಂದೆಯೂ ನುಡಿದಂತೆ ನಡೆದಿದ್ದೇವೆ. ಮುಂದೆಯೂ ಸಹ ಹಾಗೆಯೇ ನಡೆಯುತ್ತೇವೆ ಎಂದು ನೂತನ ಸಿಎಂ ಸಿದ್ದರಾಮಯ್ಯ ಪ್ರಮಾಣ ವಚನ ಬಳಿಕ ಹೇಳಿದ್ದಾರೆ.

ಬೆಂಗಳೂರು: ಇಂದು 12:30ಕ್ಕೆ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೀಗ ಎರಡನೇ ಭಾರಿ ಮತ್ತೆ ಮುಖ್ಯ ಮಂತ್ರಿಯಾಗಿದ್ದಾರೆ. ಡಿ.ಕೆ. ಶಿವಕುಮಾರ್​ ಅವರು ಉಪ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದು. ಬೆಂಗಳೂರಿನ  ಕಂಠೀರವ ಸ್ಟೇಡಿಯಂನಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜನರ ಆಶೀರ್ವಾದಿಂದಲೇ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌ಗೆ ಸಿಕ್ಕಿರುವ ಜಯ ಏಳು ಕೋಟಿ ಕನ್ನಡಿಗರಿಗೆ ಸಿಕ್ಕಿರುವ ಜಯವಾಗಿದೆ. ಇನ್ನೂ ಜನರಿಗೆ ಕೊಟ್ಟಿರುವ ಐದು ಗ್ಯಾರಂಟಿಗಳನ್ನು ಇಂದೇ ಕ್ಯಾಬಿನೆಟ್‌ ಮೀಟಿಂಗ್‌ನಲ್ಲಿ ಒಪ್ಪಿಗೆ ಪಡೆದು, ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Karnataka Government Formation: ಐದು ಗ್ಯಾರಂಟಿಗಳ ಬಗ್ಗೆ ಮೊದಲ ಕ್ಯಾಬಿನೆಟ್‌ನಲ್ಲೇ ನಿರ್ಧಾರ!

Video Top Stories