Asianet Suvarna News Asianet Suvarna News

'ಕೈ' ವಿರುದ್ಧ ಭಜರಂಗದಳ ಅಭಿಯಾನ: ನಾಳೆ ಸಂಜೆ ರಾಜ್ಯಾದ್ಯಂತ ಹನುಮಾನ್‌ ಚಾಲೀಸಾ ಪಠಣ

ಕೇಸರಿ ಪಡೆಗೆ ಅಸ್ತ್ರವಾಯ್ತು ಭಜರಂಗದಳ ಬ್ಯಾನ್‌ ಭರವಸೆ
ಕೊನೆ ಹಂತದಲ್ಲಿ ಬಿಜೆಪಿಗೆ ಮತ್ತೊಂದು ಹಿಂದುತ್ವದ ಅಸ್ತ್ರ
ಕಾಂಗ್ರೆಸ್‌ಗೆ ಟಕ್ಕರ್‌ ನೀಡಲು ಭಜರಂಗದಳ ಪ್ಲ್ಯಾನ್‌

ಮೈಸೂರು: ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ಬ್ಯಾನ್‌ ಮಾಡುವುದಾಗಿ ಹೇಳಿದ್ದು, ಇದು ಇದೀಗ ಕೇಸರಿ ಪಡೆಗೆ ಅಸ್ತ್ರವಾಗಿದೆ. ಅಲ್ಲದೇ ರಾಜ್ಯಾದ್ಯಂತ ಕಾಂಗ್ರೆಸ್ ವಿರುದ್ಧ ಭಜರಂಗದಳ ಅಭಿಯಾನ ಆರಂಭಿಸಿದ್ದು, ನಾಳೆ ಸಂಜೆ ಏಳು ಗಂಟೆಗೆ ರಾಜ್ಯಾದ್ಯಂತ ಸಾಮೂಹಿಕ ಹನುಮಾನ್‌ ಚಾಲೀಸಾ ಪಠಣಕ್ಕೆ ಕರೆ ಕೊಡಲಾಗಿದೆ. ಈ ಮೂಲಕ ಬಿಜೆಪಿಗೆ ಮತ್ತೊಂದು ಹಿಂದುತ್ವದ ಅಸ್ತ್ರ ಸಿಕ್ಕಂತಾಗಿದೆ. ಇನ್ನೂ ಈ ಬಗ್ಗೆ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್‌ಗೆ ವಿನಾಶ ಕಾಲೇ ವಿಪರೀತ ಬುದ್ಧಿ ಬಂದಿದೆ. ಅವರು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಇದು ಅವರ ತಿರುಕನ ಕನಸು, ಬಂದ್ರೆ ತಾನೇ ಬ್ಯಾನ್‌ ಮಾಡೋದು ಎಂದು ಬಿಎಸ್‌ವೈ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಇದನ್ನೂ ವೀಕ್ಷಿಸಿ: ಭಜರಂಗದಳ ಬ್ಯಾನ್ ವಿಚಾರ: ಮಂಡ್ಯದ ಕೆರೆಗೋಡಿನಲ್ಲಿ ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ

Video Top Stories