ಕಾಂಗ್ರೆಸ್-ಜೆಡಿಎಸ್ ಸೇರುತ್ತೇನೆ ಎಂಬುದು ಸುಳ್ಳು ಸುದ್ದಿ: ಬಾಲಚಂದ್ರ ಜಾರಕಿಹೊಳಿ
ಬಿಜೆಪಿ ಬಿಟ್ಟು ಬೇರೆ ಯಾವ ಪಕ್ಷದಿಂದಲೂ ಸ್ಪರ್ಧಿಸಲ್ಲ, ರಮೇಶ್ ಜಾರಕಿಹೊಳಿ ಸಹ ಗೋಕಾಕ್'ನಿಂದ ಸ್ಪರ್ಧಿಸುತ್ತಾರೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಜೆಡಿಎಸ್ ಹಾಗೂ ಕಾಂಗ್ರೆಸ್'ಗೆ ಹೋಗುತ್ತೇನೆ ಎಂದು ವೈರಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ರಾಜಾಪುರ ಗ್ರಾಮದಲ್ಲಿ ಬಾಲಚಂದ್ರ ಜಾರಕಿಹೋಳಿ ಸ್ಪಷ್ಟನೆ ನೀಡಿದ್ದಾರೆ. ಮೋದಿ, ಶಾ ಇರುವ ತನಕ 10 ವರ್ಷ ಬಿಜೆಪಿಯನ್ನು ಅಲುಗಾಡಿಸಲು ಆಗುವುದಿಲ್ಲ. ಮೋದಿ ಕೇಂದ್ರದಲ್ಲಿದ್ದಾರೆ ಕೆಲಸ ಮಾಡುವುದು ನನಗೆ ಗೊತ್ತಿದೆ. ಹಿಮಾಚಲ ಪ್ರದೇಶದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಹೈಕಮಾಂಡ್ ಶ್ರಮದಿಂದ ಕರ್ನಾಟಕದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಅಧಿಕಾರದಲ್ಲಿದ್ದರೆ ಎಲ್ಲಾ ಕೆಲಸಗಳು ಆಗುತ್ತದೆ ಎಂದು ಹೇಳಿದರು.