ಎಚ್ಡಿಕೆಗೆ ಪೊಲೀಸರ ಮೇಲೆ ಡೌಟು; ಎಚ್ಡಿಕೆ ಸಿಎಂ ಆಗಿದ್ರಾ ಎಂದು ಗೃಹಮಂತ್ರಿಗೆ ಡೌಟು!
ಮಂಗಳೂರು ಏರ್ಪೋರ್ಟ್ನಲ್ಲಿ ಬಾಂಬ್ ಪತ್ತೆ ಪ್ರಕರಣ; ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ; ಎಚ್ಡಿಕೆ ವಿರುದ್ಧ ಗೃಹಮಂತ್ರಿ ಬಸವರಾಜ್ ಬೊಮ್ಮಾಯಿ ಗರಂ
ಬೆಂಗಳೂರು (ಜ.22): ಮಂಗಳೂರು ಏರ್ಪೋರ್ಟ್ನಲ್ಲಿ ಬಾಂಬ್ ಪತ್ತೆ ಪ್ರಕರಣ ಈಗ ರಾಜಕೀಯ ಕೆಸರೆರಚಾಟ ಶುರುವಾಗಿದೆ. ಮಂಗಳವಾರ ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಅದೊಂದು ಅಣಕು ಪ್ರದರ್ಶನವೆಂದು ಹೇಳಿದ್ದರು.
ಇದನ್ನೂ ಓದಿ | ಮಂಗಳೂರು ಬಾಂಬರ್ ಆದಿತ್ಯ ರಾವ್ ಪೊಲೀಸರ ಮುಂದೆ ಶರಣು
ಈಗ ಎಚ್ಡಿಕೆ ಹೇಳಿಕೆಗೆ ಗೃಹಮಂತ್ರಿ ಬಸವರಾಜ್ ಬೊಮ್ಮಾಯಿ ಗರಂ ಆಗಿದ್ದು, ಎಚ್ಡಿಕೆ ಈ ಹಿಂದೆ ಸಿಎಂ ಆಗಿದ್ದರೇ ಎಂಬ ಸಂಶಯ ಹುಟ್ಟಿಕೊಂಡಿದೆ ಎಂದು ವ್ಯಂಗ್ಯವಾಡಿದ್ದರು. ಅಷ್ಟೇ ಅಲ್ಲ, ಎಚ್ಡಿಕೆ ವಿಧಿವಿಜ್ಞಾನ ತಜ್ಞನೂ ಅಲ್ಲ, ಪೊಲೀಸರಿಗೆ ಅವರ ಸರ್ಟಿಫಿಕೆಟೂ ಬೇಕಿಲ್ಲ ಎಂದು ಹರಿಹಾಯ್ದಿದ್ದಾರೆ.
ಬಾಂಬಿಡುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಆದಿತ್ಯ ರಾವ್ ಬೆಂಗಳೂರು ಪೊಲೀಸರ ಮುಂದೆ ಶರಣಾಗಿದ್ದಾನೆ.