ಕುಮಾರಸ್ವಾಮಿ ಸರ್ಕಾರ ಬೀಳಿಸಿದ ವಿಚಾರ ಕೆದಕಿದ ಡಿಕೆಶಿಗೆ ತಿರುಗೇಟು, ಯತೀಂದ್ರಗೆ ವಿಡಿಯೋ ಸಂಕಷ್ಟ!

ಡಿಕೆಶಿಗೆ ತಿರುಗೇಟು ನೀಡಿದ ಬಿಸಿ ಪಾಟೀಲ್, ಯತೀಂದ್ರ ಸಿದ್ದರಾಮಯ್ಯ ವಿಡಿಯೋ ಸಂಚಲನ, ಟ್ರಾನ್ಸ್‌ಫರ್ ದಂಧೆ ಆರೋಪ, ವಿಜಯೇಂದ್ರ ಆಯ್ಕೆಗೆ ಬೆಲ್ಲದ್ ಮೌನ, ಮುರುಘಾ ಶ್ರೀಗೆ ಜಾಮೀನು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

ಕುಮಾರಸ್ವಾಮಿ ಸರ್ಕಾರ ಬೀಳಿಸಿದ ವಿಚಾರ ಕೆದಕಿ ಹೇಳಿಕೆ ನೀಡಿದ ಡಿಕೆ ಶಿವಕುಮಾರ್‌ಗೆ ಇಂದು ಬಿಜೆಪಿ ನಾಯಕ ಬಿಸಿ ಪಾಟೀಲ್ ತಿರುಗೇಟು ನೀಡಿದ್ದಾರೆ. ಡಿಕೆಶಿ ಸಿಎಂ ಮಾಡುವ ವಿಚಾರದಲ್ಲಿ ನಾವು ಕರೆ ಮಾಡಿಲ್ಲ ಎಂದು ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ಇದರ ನಡುವೆ ಯತೀಂದ್ರ ಸಿದ್ದರಾಮಯ್ಯನವರ ವಿಡಿಯೋ ಒಂದು ವೈರಲ್ ಆಗಿದೆ. ಸಿಎಂ ಸಿದ್ದರಾಮಯ್ಯ ಜೊತೆ ಫೋನ್ ಮೂಲಕ ಮಾತನಾಡುವ ವಿಡಿಯೋ ಇದಾಗಿದ್ದು, ಟ್ರಾನ್ಸ್‌ಫರ್ ದಂಧೆ ಮಾಡುತ್ತಿದ್ದಾರೆ ಆರೋಪ ಇದೀಗ ಕಾಂಗ್ರೆಸ್ ಸರ್ಕಾರ ಎದುರಾಗಿದೆ. ವಿಪಕ್ಷ ನಾಯಕನ ಆಯ್ಕೆ ಕಸರತ್ತು, ವಿ ಸೋಮಣ್ಣ ಸೇರಿದಂತೆ ಹಲವರ ಮುನಿಸು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Add Asianetnews Kannada as a Preferred SourcegooglePreferred

Related Video