Bellary | ವಿಜೃಂಭಣೆಯಿಂದ ನಡೆದ ಕೋಟೆ ಮಲ್ಲೇಶ್ವರ ಬ್ರಹ್ಮರಥೋತ್ಸವ | Kannada News | Suvarna News

Isthiyakh S  | Published: Feb 12, 2025, 9:00 PM IST

ಬಳ್ಳಾರಿ ನಗರದ ಆರಾಧ್ಯ ದೈವ ಕೋಟೆ ಮಲ್ಲೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಅತ್ಯಂತ ವಿಜಂಭಣೆಯಿಂದ ನಡೆಯಿತು. ಬಳ್ಳಾರಿ ನಗರ ಸೇರಿದಂತೆ ವಿವಿಧ ಕಡೆಯಿಂದ ಆಗಮಿಸಿದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿ, ಹೂವು, ಬಾಳೆ ಹಣ್ಣು, ಉತ್ತತ್ತಿ ಎಸೆದು ಭಕ್ತಿ ಸಮರ್ಪಿಸಿದರು. ಬೆಳ್ಳಂ ಬೆಳಿಗ್ಗೆ ವಿವಿಧ ಹೂವುಗಳಿಂದ ಅಲಂಕೃತ ಗೊಂಡ ಮಡಿ ತೇರನ್ನು ನೆರೆದ ಸಾವಿರಾರು ಭಕ್ತರು ಎಳೆದು ಭಕ್ತಿ ಸಮರ್ಪಿಸಿದರೇ, ಸಂಜೆ ಸಾರ್ವಜನಿಕ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು. ರಥೋತ್ಸವ ಹಿನ್ನೆಲೆ ಕೋಟೆ ಮಲ್ಲೇಶ್ವರ ದೇವಾಲಯದಲ್ಲಿ ಪ್ರಧಾನ ಅರ್ಚಕರ ನೇತೃತ್ವದಲ್ಲಿ ರುದ್ರಾಭಿಷೇಕ, ವಿವಿಧ ಪೂಜೆ, ಅಲಂಕಾರ, ಮಂಗಳಾರತಿ ಸೇರಿದಂತೆ ವಿವಿಧ ಪೂಜೆಗಳು ನಡೆದವು. ಜಾತ್ರೆ ಹಿನ್ನೆಲೆ ಕೋಟೆ ಮಲ್ಲೇಶ್ವರ ಸ್ವಾಮಿಗೆ ಚಿನ್ನದ ಅಲಂಕಾರ ಮಾಡಲಾಗಿತ್ತು. ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆಯುತ್ತಿರೋ ಹಿನ್ನೆಲೆ ಭಕ್ತರಿಗೆ ಷಾಮೀಯಾನದಿಂದ ನೆರಳಿನ ವ್ಯವಸ್ಥೆ ಮತ್ತು ಕುಡಿಯುವ ನೀರು ವ್ಯವಸ್ಥೆ ಮಾಡಲಾಗಿತ್ತು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Read More...