Asianet Suvarna News Asianet Suvarna News

ಬೆಂಗ್ಳೂರು ಗಲಭೆ: ಮನೆ ಹೊತ್ತಿ ಉರಿದ್ರು ದೂರು ನೀಡಲು ಹಿಂಜರಿಯುತ್ತಿದ್ದಾರಾ ಶಾಸಕ ಅಖಂಡ..?

ಒಂದು ಸಲ ಪೊಲೀಸರಿಗೆ ದೂರು ನೀಡುತ್ತೇನೆ ಅಂತಾರೆ. ಒಂದು ಸಲ ನಾವೆಲ್ಲ ಅಣ್ಣ ತಮ್ಮಂದಿರಂತೆ ಇದ್ದೇವೆ ಎಂದು ಹೇಳುತ್ತಿದ್ದಾರೆ. ಈ ಮೂಲಕ ದೂರು ನೀಡಲು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಮೀನಾಮೇಷ ಎಣಿಸುತ್ತಿದ್ದಾರೆ.

ಬೆಂಗಳೂರು, (ಆ.14): ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆಯಲ್ಲಿ ತಮ್ಮ ಮನೆಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಇದರಿಂದ 3 ಕೋಟಿ ರೂ. ನಷ್ಟವಾಗಿದೆ ಎಂದು ಪುಲಕೇಶಿ ನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರೇ ಹೇಳಿದ್ದಾರೆ.

ಬೆಂಗಳೂರು ಗಲಭೆ; ಸಿಸಿಬಿಯಿಂದ ಮಿಡ್‌ನೈಟ್ ಆಪರೇಶನ್, 50 ಕ್ಕೂ ಹೆಚ್ಚು ಪುಂಡರು ವಶಕ್ಕೆ

ಆದ್ರೆ, ಅವರು ಒಂದು ಸಲ ಪೊಲೀಸರಿಗೆ ದೂರು ನೀಡುತ್ತೇನೆ ಅಂತಾರೆ. ಒಂದು ಸಲ ನಾವೆಲ್ಲ ಅಣ್ಣ ತಮ್ಮಂದಿರಂತೆ ಇದ್ದೇವೆ ಎಂದು ಹೇಳುತ್ತಿದ್ದಾರೆ. ಈ ಮೂಲಕ ದೂರು ನೀಡಲು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಮೀನಾಮೇಷ ಎಣಿಸುತ್ತಿದ್ದಾರೆ.

Video Top Stories