ರಮೇಶ್ ಜಾರಕಿಹೊಳಿ ಮಣಿಸಲು ಸಿದ್ದು ತಂತ್ರಕ್ಕೆ ಡಿಕೆಶಿಯಿಂದ ಮತ್ತೊಂದು ತಂತ್ರ
ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಆಗಾಗ ಮುಸುಕಿನ ಗುದ್ದಾಟ ನಡೆಯುತ್ತಲೇ ಇರುತ್ತೆ. ಇದೀಗ ಉಪಚುನಾವಣೆ ಟಿಕೇಟ್ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆಶಿ-ಸಿದ್ದು ನಡುವೆ ಮತ್ತೊಂದು ಮುಸುಕಿನ ಗುದ್ದಾಟ ಶುರುವಾಗಿದೆ. ಗೋಕಾಕ್ ಕ್ಷೇತ್ರದ ಉಪಚುನಾವಣೆ ಫೈಟ್ ಬಿರುಸುಗೊಂಡಿದ್ದು ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಪೈಪೋಟಿ ನಡೆದಿದೆ.
ಬೆಂಗಳೂರು/ ಬೆಳಗಾವಿ, [ನ.11]: ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಆಗಾಗ ಮುಸುಕಿನ ಗುದ್ದಾಟ ನಡೆಯುತ್ತಲೇ ಇರುತ್ತೆ. ಇದೀಗ ಉಪಚುನಾವಣೆ ಟಿಕೇಟ್ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆಶಿ-ಸಿದ್ದು ನಡುವೆ ಮತ್ತೊಂದು ಮುಸುಕಿನ ಗುದ್ದಾಟ ಶುರುವಾಗಿದೆ.
ಗೋಕಾಕ್ ಕ್ಷೇತ್ರದ ಉಪಚುನಾವಣೆ ಫೈಟ್ ಬಿರುಸುಗೊಂಡಿದ್ದು ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಪೈಪೋಟಿ ನಡೆದಿದೆ.
ಬೆಳಗಾವಿಯ ಗೋಕಾಕ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಜಾರಕಿಹೊಳಿ ಸ್ಪರ್ಧಿಸುವ ಸಾಧ್ಯತೆಗಳಿದ್ದು, ರಮೇಶ್ ಜಾರಕಿಹೊಳಿ ಸೋಲಿಸಲು ಸಿದ್ದರಾಮಯ್ಯ ಲಖನ್ ಜಾರಕಿಹೊಳಿಯನ್ನ ಅಭ್ಯರ್ಥಿಯನ್ನಾಗಿಸಲು ಮುಂದಾಗಿದ್ದಾರೆ.
ಆದ್ರೆ ಡಿ.ಕೆ. ಶಿವಕುಮಾರ್ ಲಖನ್ ಬದಲಿಗೆ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪ್ರಯತ್ನಿಸ್ತಿದ್ದು, ಹೈಕಮಾಂಡ್ ಮಟ್ಟದಲ್ಲಿ ಲಾಭಿ ನಡೆಸುತ್ತಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಹಾಗಾದ್ರೆ ಡಿಕೆಶಿಯ ಅಭ್ಯರ್ಥಿ ಯಾರು..? ಗೋಕಾಕ್ ಕ್ಷೇತ್ರದಿಂದ ಕಣಕ್ಕಿಳಿಸಲು ಡಿಕೆಶಿ ಯಾರ ಪರ ಲಾಭಿ ನಡೆಸುತ್ತಿದ್ದಾರೆ..? ಇದೆಲ್ಲಾ ಮಾಹಿತಿಯನ್ನು ವಿಡಿಯೋನಲ್ಲಿ ನೋಡಿ..