2 ವರ್ಷದ ಬಳಿಕ ಉರುಳುವ ಭೀತಿಯಲ್ಲಿ ಬಿಜೆಪಿ ಜೆಡಿಯು ಮೈತ್ರಿ ಸರ್ಕಾರ, ಆರ್ಜೆಡಿ ಜೊತೆ ದೋಸ್ತಿ!
ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ರಾಜ್ಯಪಾಲರನ್ನು ನಿತೀಶ್ ಕುಮಾರ್ ಹಾಗೂ ತೇಜಸ್ವಿ ಯಾದವ್ ಭೇಟಿಯಾಗಿದ್ದಾರೆ.
ಪಾಟ್ನಾ(ಆ.09) ಕಳೆದ ಎರಡು ವರ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸಿದ್ದ ಸಿಎಂ ನಿತೀಶ್ ಕುಮಾರ್ ಇದೀಗ ಮೈತ್ರಿ ಮುರಿದುಕೊಳ್ಳಲು ಮುಂದಾಗಿದ್ದಾರೆ. ಈಗಾಗಲೇ ರಾಜ್ಯಪಾಲರನ್ನು ಭೇಟಿಯಾಗಲು ಸಮಯ ನಗದಿಯಾಗಿದೆ. 4 ಗಂಟೆಗೆ ನಿತೀಶ್ ಕುಮಾರ್ ಹಾಗೂ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ರಾಜ್ಯಪಾಲರ ಭೇಟಿಯಾಗಲಿದೆ. ಜೊತೆಗೆ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ ಅನ್ನೋ ಮಾತುಗಳ ದಟ್ಟವಾಗಿದೆ. ಕೆಲವೇ ಕ್ಷಣಗಳಲ್ಲಿ ನಿತೀಶ್ ಕುಮಾರ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.