Asianet Suvarna News Asianet Suvarna News

News Hour: ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ದೆಹಲಿಯಲ್ಲಿ ಫೈನಲ್!


ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಕಡಿವಾಣ ಹಾಕಲೇಬೇಕು ಎನ್ನುವ ಪಣ ತೊಟ್ಟಿರುವ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳ ನಡುವಿನ ಮೈತ್ರಿ ನಾಳೆ ಅಂತಿಮವಾಗು ಸಾಧ್ಯತೆ ಇದೆ.
 

ಬೆಂಗಳೂರು (ಸೆ.20): ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ನಾಳೆ ದೆಹಲಿಯಲ್ಲಿ ಫೈನಲ್ ಆಗುವ ಸಾಧ್ಯತೆ ಇದೆ. ದೆಹಲಿಯಲ್ಲಿ ಬಿಜೆಪಿ ಜೊತೆ ಹೆಚ್ಡಿಕೆ ಫೈನಲ್ ಮಾತುಕತೆ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಗುರುವಾರ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ ಈಗಾಗಲೇ ದೆಹಲಿಯಲ್ಲಿದ್ದಾರೆ. ನಾಳೆ ಒಟ್ಟಾಗಿ ಬಿಜೆಪಿ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ನಾಳೆ ಬಿಜೆಪಿ ಜೊತೆ ಸೀಟು ಹಂಚಿಕೆ ಕುರಿತು ಮಹತ್ವದ ಚರ್ಚೆ ಆಗಬಹುದು ಎನ್ನಲಾಗಿದೆ. ಈಗಾಗಲೇ 1 ಸುತ್ತಿನ ಮಾತುಕತೆಯನ್ನು ದೇವೆಗೌಡರು ಮುಗಿಸಿದ್ದಾರೆ. ಕೆಲವು ಕ್ಷೇತ್ರ ಬಿಟ್ಟುಕೊಡಲು ಬಿಜೆಪಿ ನಾಯಕರು ಕೂಡ ಒಪ್ಪಿದ್ದಾರೆ. 5 ಕ್ಷೇತ್ರಕ್ಕೆ ಜೆಡಿಎಸ್ ಪಟ್ಟು ಹಿಡಿದಿದ್ದರೆ, 4 ಕ್ಷೇತ್ರಕ್ಕೆ ಬಿಜೆಪಿಯಿಂದ ಒಪ್ಪಿಗೆ ಸಿಕ್ಕಿದೆ.

ಬಿಜೆಪಿ ಕದ ತಟ್ಟಿದ್ದರಾ ಕಾಂಗ್ರೆಸ್‌ ಶಾಸಕ?: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ

ನಾಳೆ ಅಮಿತ್ ಶಾ, ಜೆಪಿ ನಡ್ಡಾ ಜೊತೆ ಫೈನಲ್ ಮಾತುಕತೆ ಆಗಬಹುದು. ಸಭೆ ಬಳಿಕ ನಡ್ಡಾ, ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದ್ದು, ಸುದ್ದಿಗೋಷ್ಠಿಯಲ್ಲೇ ಸೀಟು ಹಂಚಿಕೆ, ಕ್ಷೇತ್ರ ಘೋಷಣೆ ಸಾಧ್ಯತೆ ಇದೆ ಎನ್ನಲಾಗಿದೆ.

Video Top Stories