ಸ್ಪೀಕರ್ ಭೇಟಿಗೆ ಬಂದ ಲಿಂಬಾವಳಿ ಸುವರ್ಣನ್ಯೂಸ್ಗೆ ಹೇಳಿದ್ದೇನು?
ರಾಜ್ಯ ರಾಜಕಾರಣದ ಬೆಳವಣಿಗೆಗಳ ಕುರಿತು ಚರ್ಚಿಸಲು ಅರವಿಂದ್ ಲಿಂಬಾಬಳಿ ನೇತೃತ್ವದ ಬಿಜೆಪಿ ನಿಯೋಗ ಇಂದು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದೆ.
ಬೆಂಗಳೂರು(ಜು.09): ರಾಜ್ಯ ರಾಜಕಾರಣದ ಬೆಳವಣಿಗೆಗಳ ಕುರಿತು ಚರ್ಚಿಸಲು ಅರವಿಂದ್ ಲಿಂಬಾಬಳಿ ನೇತೃತ್ವದ ಬಿಜೆಪಿ ನಿಯೋಗ ಇಂದು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದೆ. ಆದರೆ ವೈಯಕ್ತಿಕ ಕೆಲಸದ ನಿಮಿತ್ತ ಸ್ಪೀಕರ್ ಕಚೇರಿಗೆ ಬರದಿದ್ದ ಕಾರಣ ಬಿಜೆಪಿ ನಿಯೋಗ ಬರಗೈಲಿ ವಾಪಸ್ಸಾಗಿದೆ. ಈ ವೇಳೆ ಸುವರ್ಣನ್ಯೂಸ್ ಪ್ರತಿನಿಧಿ ಜೊತೆ ಮಾತನಾಡಿದ ಅರವಿಂದ್ ಲಿಂಬಾವಳಿ ರಾಜ್ಯಾದ್ಯಂತ ಸಮ್ಮಿಶ್ರ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು, ಈ ನಿಟ್ಟಿನಲ್ಲಿ ಸ್ಪೀಕರ್ ಭೇಟಿ ಮಾಡಲು ಬಂದಿದ್ದಾಗಿ ತಿಳಿಸಿದರು. ಆದರೆ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿಯಾಗುವುದಿಲ್ಲ ಎಂದು ಲಿಂಬಾಬಳಿ ಸ್ಪಷ್ಟಪಡಿಸಿದರು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...