Asianet Suvarna News Asianet Suvarna News

ಸ್ಪೀಕರ್ ಭೇಟಿಗೆ ಬಂದ ಲಿಂಬಾವಳಿ ಸುವರ್ಣನ್ಯೂಸ್‌ಗೆ ಹೇಳಿದ್ದೇನು?

ರಾಜ್ಯ ರಾಜಕಾರಣದ ಬೆಳವಣಿಗೆಗಳ ಕುರಿತು ಚರ್ಚಿಸಲು ಅರವಿಂದ್ ಲಿಂಬಾಬಳಿ ನೇತೃತ್ವದ ಬಿಜೆಪಿ ನಿಯೋಗ ಇಂದು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದೆ. 

ಬೆಂಗಳೂರು(ಜು.09): ರಾಜ್ಯ ರಾಜಕಾರಣದ ಬೆಳವಣಿಗೆಗಳ ಕುರಿತು ಚರ್ಚಿಸಲು ಅರವಿಂದ್ ಲಿಂಬಾಬಳಿ ನೇತೃತ್ವದ ಬಿಜೆಪಿ ನಿಯೋಗ ಇಂದು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದೆ. ಆದರೆ ವೈಯಕ್ತಿಕ ಕೆಲಸದ ನಿಮಿತ್ತ ಸ್ಪೀಕರ್ ಕಚೇರಿಗೆ ಬರದಿದ್ದ ಕಾರಣ ಬಿಜೆಪಿ ನಿಯೋಗ ಬರಗೈಲಿ ವಾಪಸ್ಸಾಗಿದೆ. ಈ ವೇಳೆ ಸುವರ್ಣನ್ಯೂಸ್ ಪ್ರತಿನಿಧಿ ಜೊತೆ ಮಾತನಾಡಿದ ಅರವಿಂದ್ ಲಿಂಬಾವಳಿ ರಾಜ್ಯಾದ್ಯಂತ ಸಮ್ಮಿಶ್ರ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು, ಈ ನಿಟ್ಟಿನಲ್ಲಿ ಸ್ಪೀಕರ್ ಭೇಟಿ ಮಾಡಲು ಬಂದಿದ್ದಾಗಿ ತಿಳಿಸಿದರು. ಆದರೆ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿಯಾಗುವುದಿಲ್ಲ ಎಂದು ಲಿಂಬಾಬಳಿ ಸ್ಪಷ್ಟಪಡಿಸಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

Video Top Stories