ಇದು 'ನಮೋ' ರಣತಂತ್ರ: ಒಕ್ಕಲಿಗ, ವಾಲ್ಮೀಕಿ ಹಾಗೂ ಕುರುಬರ ಮತಬೇಟೆ?

PM Narendra Modi Bengaluru Karnataka Visit: ಪ್ರಧಾನಿ ಮೋದಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಿದ್ದು, ಮಹರ್ಷಿ ವಾಲ್ಮೀಕಿ, ಸಂತಶ್ರೇಷ್ಠ ಕನಕದಾಸರಿಗೆ ಕೂಡ ನಮೋ ಎಂದಿದ್ದಾರೆ.

Share this Video
  • FB
  • Linkdin
  • Whatsapp

ಒಕ್ಕಲಿಗ, ಕುರುಬ ಹಾಗೂ ವಾಲ್ಮೀಕಿ ಸಮುದಾಯಗಳ ಮತಬೇಟೆಗೆ ಬಿಜೆಪಿ ಭರ್ಜರಿ ಪ್ಲಾನ್ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪೇಗೌಡರ ಪ್ರತಿಮೆ ಅನಾವರಣದ ಮೂಲಕ ಒಕ್ಕಲಿಗ ಸಮುದಾಯದ ಮತ ಬ್ಯಾಂಕ್‌'ಗೆ ಕೈ ಹಾಕಿದ್ದಾರೆ. ಹಾಗೂ ಕನಕದಾಸರ ಪ್ರತಿಮೆ ಮತ್ತು ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕುರುಬ ಮತ್ತು ವಾಲ್ಮೀಕಿ ಸಮುದಾಯವನ್ನು ಸೆಳೆದಿದ್ದಾರೆ. 3 ಸಮುದಾಯ, 3 ಅಸ್ಮಿತೆ ಹಾಗೂ 100 ಲೆಕ್ಕಾಚಾರಗಳ ಮೂಲಕ ಪ್ರಧಾನಿ ಮೋದಿ ಕೇಸರಿ ವಿಜಯ ಚರಿತ್ರೆ ಬರೆದಿದ್ದಾರೆ ಎನ್ನಲಾಗುತ್ತಿದೆ. ಮೂರು ಮಹಾತ್ಮರು, ಮೂರು ಅಸ್ಮಿತೆ, ನೂರು ಲೆಕ್ಕಾಚಾರ. ಕೇಸರಿ ಪಡೆಯ ಈ ತಂತ್ರ, ಮೋದಿ ವಿಜಯ ಮಂತ್ರ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದ ಗದ್ದುಗೆ ಏರಿಸುತ್ತಾ ಎಂಬುದು ಕಾದು ನೋಡಬೇಕಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರೀತಿಸಿ ಮದುವೆ ಆಗದೇ ಇರೋದು ವಂಚನೆಯಲ್ಲ: ಹೈಕೋರ್ಟ್

Related Video