Asianet Suvarna News Asianet Suvarna News

ಸಿದ್ರಾಮುಲ್ಲಾ ಖಾನ್ ಅಧಿಕಾರಕ್ಕೆ ಬಂದ್ರೆ ಹಿಂದೂಗಳ ಹತ್ಯೆ, ಸಿಟಿ ರವಿ ಮಾತಿಗೆ ಕೆರಳಿದ ಕಾಂಗ್ರೆಸ್‌!

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಕೇಸರಿ ಪಡೆ ಸಿಡಿದೆದ್ದಿದೆ. ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್‌ ಎಂದು ಕರೆದ ಸಿಟಿ ರವಿ ವಿರುದ್ಧ ಕಾಂಗ್ರೆಸ್‌ ಕೂಡ ಕಿಡಿಕಾರಿದ್ದು, ಮನೆಗೆ ಮುತ್ತಿಗೆ ಹಾಕೋದಾಗಿ ಎಚ್ಚರಿಸಿದೆ.
 

ಬೆಂಗಳೂರು (ನ.28): ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್‌ ಎಂದು ಕರೆದ ಬಿಜೆಪಿ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿ ಸಿಟಿ ರವಿ ವಿರುದ್ಧ ಕಾಂಗ್ರೆಸ್‌ ಕೆಂಡಕಾರಿದೆ.  'ಸಿದ್ರಾಮುಲ್ಲಾ ಖಾನ್ ಅಧಿಕಾರಕ್ಕೆ ಬಂದ್ರೆ ಹಿಂದೂಗಳ ಹತ್ಯೆ. ಸಿದ್ದರಾಮಯ್ಯ ಸರ್ಕಾರದಲ್ಲೇ ಅತಿ ಹೆಚ್ಚು ಹಿಂದೂಗಳ ಕೊಲೆ. ಅವರು ಸಿದ್ರಾಮುಲ್ಲಾ ಖಾನ್ ಎಂದು ಸಿಟಿ ರವಿ ಹೇಳಿದ್ದರು.

ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ ಸಿಟಿ ರವಿ ಅವರ ನಿವಾಸಕ್ಕೆ ಮುತ್ತಿಗೆ ಹಾಕೋದಾಗಿ ಎಚ್ಚರಿಕೆ ನೀಡಿತ್ತು. ತಿರುಗೇಟು ನೀಡಿದ್ದ ಸಿಟಿ ರವಿ ಮುತ್ತಿಗೆ ಹಾಕೋರನ್ನ ದೇವರು ಅಂತಾ ಭಾವಿಸಿ ಸನ್ಮಾನ ಮಾಡುತ್ತೇನೆ. ಸಿದ್ದರಾಮಯ್ಯಗೆ ಹತ್ತಿರವಾಗಿರುವುದನ್ನೇ ನಾನು ಹೇಳಿದ್ದೇನೆ. ಸಿದ್ದರಾಮಯ್ಯಗೆ ಕೇಸರಿ ಪೇಟ, ಕುಂಕುಮ ಕಂಡ್ರೆ ಆಗಲ್ಲ ಎಂದು ಸಿಟಿ ರವಿ ಪರೋಕ್ಷವಾಗಿ ಟಾಂಗ್‌ ನೀಡಿದ್ದಾರೆ.

ಮತದಾರರ ಮಾಹಿತಿ ಕಳ್ಳತನ, ಬಿಜೆಪಿ ಮೇಲೆ ಮುಗಿಬಿದ್ದ ಕಾಂಗ್ರೆಸ್‌, ಚುನಾವಣಾ ಆಯೋಗದಿಂದ ಸ್ಪಷ್ಟನೆ!

ಇನ್ನು ಧಾರವಾಡದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಸಿಟಿ ರವಿ ಮನೆಗೆ ಮುತ್ತಿಗೆ ಹಾಕಿದ್ರೆ ನಾವು ಸುಮ್ಮನೆ ಇರೋದಿಲ್ಲ. ನಾವು ಕಾಂಗ್ರೆಸ್ ನಾಯಕರ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದಿದ್ದಾರೆ. ಸಿದ್ದರಾಮಯ್ಯ ಮತ್ತು ಪಟಾಲಂ ಎಚ್ಚರಿಕೆಯಿಂದ ಇರಬೇಕು. ಸಿದ್ದರಾಮಯ್ಯ ಅವರ ಕಾಲದಲ್ಲಿ ಹಿಂದೂಗಳ ಹತ್ಯೆ ಆಗಿದೆ. ಸಿದ್ದರಾಮಯ್ಯಗೆ ಕುಂಕುಮ ಇಟ್ಟುಕ್ಕೊಂಡವರನ್ನ ಭಯವಾಗುತ್ತೆ ಪಿಎಫ್‌ಐ ಕಾರ್ಯಕರ್ತರ ಹಲವು ಕೇಸ್‌ಗಳನ್ನು ವಾಪಸ್ ಪಡೆದಿದ್ದರು ಎಂದು ಜೋಶಿ ಹೇಳಿದ್ದಾರೆ.