
'ಬಿಜೆಪಿ ಲಿಂಗಾಯತ ನಾಯಕರಿಗೆ ಹೈಕಮಾಂಡ್ ಭಯ, ಅದಕ್ಕೆ ಬಿಎಸ್ವೈಗೆ ಯಾರೂ ಬೆಂಬಲಿಸುತ್ತಿಲ್ಲ'
ವಿರೋಧ ಪಕ್ಷದ ನಾಯಕರಾದ ಎಂಬಿ ಪಾಟೀಲ್ ಹಾಗೂ ಶಾಮನೂರು ಶಿವಶಂಕ್ರಪ್ಪ ಅವರು ಬಹಿರಂಗವಾಗಿಯೇ ಬಿಎಸ್ವೈ ಬೆನ್ನಿಗೆ ನಿಂತಿದ್ದಾರೆ. ಆದ್ರೆ, ಬಿಜೆಪಿಯ ಲಿಂಗಾಯತ ನಾಯಕರು ಇದುವರೆಗೂ ಯಾವುದೇ ಬಹಿರಂಗ ಹೇಳಿಕೆ ನೀಡಿಲ್ಲ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಪಾಟೀಲ್, ಬಿಜೆಪಿ ಲಿಂಗಾಯತ ನಾಯಕರಿಗೆ ಹೈಕಮಾಂಡ್ ಭಯ ಇದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ವಿಜಯಪುರ, (ಜು.20): ಸಿಎಂ ಬಿಎಸ್ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಮುಂದಾಗಿದೆ ಎನ್ನುವ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಬಿಎಸ್ವೈ ಬದಲಾವಣೆ ಮಾಡಬಾರದು ಎಂದು ಲಿಂಗಾಯತ ನಾಯಕರು ಆಗ್ರಹಿಸಿದ್ದಾರೆ.
Add Asianetnews Kannada as a Preferred Source

'ಬಿಎಸ್ವೈ ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್ಗೆ ಕರೆತರುವ ಪ್ರಯತ್ನ'
ಅದರಲ್ಲೂ ವಿರೋಧ ಪಕ್ಷದ ನಾಯಕರಾದ ಎಂಬಿ ಪಾಟೀಲ್ ಹಾಗೂ ಶಾಮನೂರು ಶಿವಶಂಕ್ರಪ್ಪ ಅವರು ಬಹಿರಂಗವಾಗಿಯೇ ಬಿಎಸ್ವೈ ಬೆನ್ನಿಗೆ ನಿಂತಿದ್ದಾರೆ. ಆದ್ರೆ, ಬಿಜೆಪಿಯ ಲಿಂಗಾಯತ ನಾಯಕರು ಇದುವರೆಗೂ ಯಾವುದೇ ಬಹಿರಂಗ ಹೇಳಿಕೆ ನೀಡಿಲ್ಲ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಪಾಟೀಲ್, ಬಿಜೆಪಿ ಲಿಂಗಾಯತ ನಾಯಕರಿಗೆ ಹೈಕಮಾಂಡ್ ಭಯ ಇದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.