
Karnataka BJP ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗ್ಬೇಕಾ? ಸಿಡಿದೆದ್ದ ರೇಣುಕಾಚಾರ್ಯ
ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗಬೇಕಾ? ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಪತನ ಆಗಲು ನಾನು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಷ್ಟು ಪ್ರಯತ್ನಿಸಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ.
ದಾವಣಗೆರೆ, (ಜ.24): ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗಬೇಕಾ? ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಪತನ ಆಗಲು ನಾನು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಷ್ಟು ಪ್ರಯತ್ನಿಸಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Cabinet Reshuffle: ಮಂತ್ರಿಸ್ಥಾನ ತ್ಯಾಗದ ಸುಳಿವು ಕೊಟ್ರಾ ಈಶ್ವರಪ್ಪ.?
ಕೆಲವು ಸಚಿವರು ಶಾಸಕರ ಫೋನ್ ಸಹ ರಿಸೀವ್ ಮಾಡಲ್ಲ. ಶಾಸಕರು ಪತ್ರವನ್ನು ಕೊಟ್ಟರೆ ಸಚಿವರು ಉತ್ತರ ಕೊಡಬೇಕು. ಆದ್ರೆ ಸಚಿವರ ಆಪ್ತ ಸಹಾಯಕರು ಶರಾ ಬರೆಯುತ್ತಾರೆ. ಇಂಥ ಸಚಿವರು ಬೇಕಾ ಎಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಟಿವಿ9ಗೆ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.