
ಶಮನವಾಗದ ಭಿನ್ನಮತ, ಅತೃಪ್ತರ ದೆಹಲಿ ಟೂರ್, ಸಿಎಂಗೆ ಎದುರಾಗಿದೆ ಸವಾಲ್..!
ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಸ್ವರೂಪ ಬದಲಾಗಿ ಮತ್ತೆ ಮುಂದುವರೆದಿದೆ. ಸಚಿವ ಸ್ಥಾನ ವಂಚಿತರಿಗೆ ಹಾಗೂ ನಿರೀಕ್ಷೆಯ ಖಾತೆ ಸಿಗದವರು ದೆಹಲಿಗೆ ಎಡತಾಕುತ್ತಿದ್ದಾರೆ.
ಬೆಂಗಳೂರು (ಆ. 10): ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಸ್ವರೂಪ ಬದಲಾಗಿ ಮತ್ತೆ ಮುಂದುವರೆದಿದೆ. ಸಚಿವ ಸ್ಥಾನ ವಂಚಿತರಿಗೆ ಹಾಗೂ ನಿರೀಕ್ಷೆಯ ಖಾತೆ ಸಿಗದವರು ದೆಹಲಿಗೆ ಎಡತಾಕುತ್ತಿದ್ದಾರೆ.
Add Asianetnews Kannada as a Preferred Source

ಅತೃಪ್ತ ಶಾಸಕರ ಟೀಂ ದೆಹಲಿಗೆ, ಖಾಲಿ ಇರುವ 4 ಸ್ಥಾನಗಳಿಗಾಗಿ ಸರ್ಕಸ್..!
ಸದ್ಯ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಉಳಿದಿವೆ. ಹೀಗಾಗಿ ಇವುಗಳ ಮೇಲೆ ಕಣ್ಣು ಹಾಕಿರುವ ಅಸಮಾಧಾನಿತ ಮುಖಂಡರು ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮುಂದುವರೆಸಿದ್ದಾರೆ. ಸಂಪುಟ ರಚನೆಯಾದರೂ ಅಸಮಾಧಾನ ತಣ್ಣಗಾಗದೇ ಇರುವುದು ಸಿಎಂ ಬೊಮ್ಮಾಯಿಗೆ ದೊಡ್ಡ ತಲೆನೋವಾಗಿದೆ.