Asianet Suvarna News Asianet Suvarna News

ಬಿಎಸ್‌ವೈ ಸರ್ಕಾರಕ್ಕೆ 1 ವರ್ಷ: ಸಚಿವರಿಗೆ ಇದೆ ಮಹಾ ಪರೀಕ್ಷೆ..!

ಬಹುದಿನಗಳ ನಂತರ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರು ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್‌ ಅವರನ್ನು ಪಕ್ಷದ ಕಚೇರಿಗೆ ಕರೆಸಿಕೊಂಡು ವಿವರ ಪಡೆದುಕೊಂಡಿದ್ದಾರೆ.

ಬೆಂಗಳೂರು (ಆ. 23): ಬಹುದಿನಗಳ ನಂತರ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರು ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್‌ ಅವರನ್ನು ಪಕ್ಷದ ಕಚೇರಿಗೆ ಕರೆಸಿಕೊಂಡು ವಿವರ ಪಡೆದುಕೊಂಡಿದ್ದಾರೆ.

ಈ ಬೆಳವಣಿಗೆ ಸಹಜವಾಗಿಯೇ ಆಡಳಿತಾರೂಢ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ್ದು, ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸಚಿವರ ಕಾರ್ಯವೈಖರಿಯನ್ನು ಪಕ್ಷದ ವತಿಯಿಂದ ಮೌಲ್ಯಮಾಪನ ಮಾಡಲಾಗುತ್ತಿದೆ ಎಂಬ ಮಾತು ಕೇಳಿಬಂದಿದೆ. ಇದೇ ರೀತಿ ಸಂತೋಷ್‌ ಅವರು ಇತರ ಸಚಿವರನ್ನೂ ಕರೆಸಿ ಮಾತುಕತೆ ನಡೆಸುವುದನ್ನು ಮುಂದುವರೆಸಿದಲ್ಲಿ ಮೌಲ್ಯಮಾಪನ ನಡೆಸುವ ಸುದ್ದಿ ಖಚಿತವಾಗಲಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ಡಿಜೆ ಹಳ್ಳಿ ಗಲಭೆ ಪಾಲಿಟಿಕ್ಸ್‌: ಕಾಂಗ್ರೆಸ್‌ಗೆ ರೀ ಎಂಟ್ರಿ ಕೊಡಲು ರೆಡಿ, ವೇದಿಕೆ ಸಿದ್ಧಗೊಳಿಸುತ್ತಿರುವ ಡಿಕೆಶಿ

Video Top Stories