
ತಮಿಳುನಾಡಲ್ಲಿ ಕೇಸರಿ ಪತಾಕೆ ಹಾರಿಸಲು ಮೋದಿ- ಶಾ ಮಾಡಿದ ಮಾಸ್ಟರ್ ಪ್ಲಾನ್ ಇದು!
ಏಪ್ರಿಲ್- ಮೇನಲ್ಲಿ ನಡೆಯಲಿರುವ ತಮಿಳುನಾಡಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಪುಟಿದೇಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ ‘ಕಲೈನರ್ ಡಿಎಂಕೆ’ ಅಥವಾ ‘ಕೆಡಿಎಂಕೆ’ ಎಂಬ ಪಕ್ಷವನ್ನು ಅವರು ಸ್ಥಾಪಿಸುವ ಸಾಧ್ಯತೆ ಇದೆ.
ಬೆಂಗಳೂರು (ನ. 20): ಏಪ್ರಿಲ್- ಮೇನಲ್ಲಿ ನಡೆಯಲಿರುವ ತಮಿಳುನಾಡಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಪುಟಿದೇಳಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ ‘ಕಲೈನರ್ ಡಿಎಂಕೆ’ ಅಥವಾ ‘ಕೆಡಿಎಂಕೆ’ ಎಂಬ ಪಕ್ಷವನ್ನು ಅವರು ಸ್ಥಾಪಿಸುವ ಸಾಧ್ಯತೆ ಇದೆ.
Add Asianetnews Kannada as a Preferred Source

67 ಸಾವಿರ ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಚೆನ್ನೈಗೆ ಭೇಟಿ ನೀಡುತ್ತಿದ್ದಾರೆ. ಆ ಸಂದರ್ಭದಲ್ಲಿ ಅಳಗಿರಿ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿ ಮುಖಾಮುಖಿ ಮಾತುಕತೆ ನಡೆಸಲಿದ್ದಾರೆ.
ಮರಾಠಾ ಪ್ರಾಧಿಕಾರ ರಚಿಸಿ ತಪ್ಪು ಮಾಡಿದ್ರಾ ಸಿಎಂ ಯಡಿಯೂರಪ್ಪ?
ತಮಿಳುನಾಡಿನಲ್ಲಿ ಬೇರು ಬಿಡಲು ಯತ್ನಿಸುತ್ತಿರುವ ಬಿಜೆಪಿ ಈಗಾಗಲೇ ಪ್ರಸಿದ್ಧ ಚಿತ್ರನಟಿ ಖುಷ್ಬೂ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದೆ. ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆಯುತ್ತಿರುವುದು ಸಂಚಲನಕ್ಕೆ ಕಾರಣವಾಗಿದೆ.