
ರಾಜ್ಯಸಭೆ ಎಲೆಕ್ಷನ್: ದೇವೇಗೌಡ್ರು ಕಣಕ್ಕಿಳಿಯದಿದ್ರೆ ಬದಲಾಗುತ್ತೆ ರಾಜಕೀಯ ಸೀನ್
ಕೊನೆ ಕ್ಷಣದಲ್ಲಿ ಏನಾದರೂ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯಸಬಾ ಚುನಾವಣಾ ಕಣದಿಂದ ಸ್ಪರ್ಧಿಸಲು ಹಿಂದೇಟು ಹಾಕಿದರೆ ರಾಜಕೀಯ ಸೀನ್ ಬದಲಾಗಲಿದೆ.
ಬೆಂಗಳೂರು, (ಜೂನ್, 06): ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಎದುರಾಗಿದ್ದು, ಇದೇ ಜೂನ್ 19ರಂದು ನಡೆಯಲಿದೆ. ಇದಕ್ಕೆ ಈಗಾಗಲೇ ಕಾಂಗ್ರೆಸ್ ಆಲಿಗೆ ಸಿಗುವ ಒಂದು ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಕಣಕ್ಕಿಳಿಸಿದೆ.
Add Asianetnews Kannada as a Preferred Source

ಆದರೂ ಇನ್ನು ಹೆಚ್ಚುವರಿ ಮತಗಳು ಉಳಿಯುವುದರಿಂದ ದೇವೇಗೌಡ್ರು ಸ್ಪರ್ಧಿಸಿದ್ರೆ ಜೆಡಿಎಸ್ಗೆ ಬೆಂಬಲ ನೀಡಲು ಕಾಂಗ್ರೆಸ್ ತೀರ್ಮಾನಿಸಿದೆ. ಇನ್ನು ಮತ್ತೊಂದೆ ಬಿಜೆಪಿ ಎರಡ ಸ್ಥಾನಗಳಲ್ಲಿ ಸುಲಭ ಜಯ ಸಾಧಿಸಲಿದೆ.
ರಾಜ್ಯಸಭಾ ಚುನಾವಣೆಗೆ ದೇವೇಗೌಡ ಬಹುತೇಕ ಫೈನಲ್: ಇಲ್ಲಿದೆ ಜೆಡಿಎಸ್ ಲೆಕ್ಕಾಚಾರ
ಆದ್ರೆ, ಹೆಚ್ಚುವರಿ ಮತಗಳೊಂದಿಗೆ ಮತ್ತೊಂದು ರಾಜಕೀಯ ಆಟವಾಡಲು ಮುಂದಾಗಿದೆ. ಕೊನೆ ಕ್ಷಣದಲ್ಲಿ ಏನಾದರೂ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯಸಬಾ ಚುನಾವಣಾ ಕಣದಿಂದ ಸ್ಪರ್ಧಿಸಲು ಹಿಂದೇಟು ಹಾಕಿದರೆ ರಾಜಕೀಯ ಸೀನ್ ಬದಲಾಗಲಿದೆ.