Asianet Suvarna News Asianet Suvarna News

ಜಾರಕಿಹೊಳಿ ಹಿಂದೂ ವಿರೋಧಿ ಹೇಳಿಕೆಯಿಂದ ಬಿಜೆಪಿಗೆ ಹೊಸ ಅಸ್ತ್ರ, ಕಾಂಗ್ರೆಸ್‌ಗೆ ಸಂಕಷ್ಟ!

ಭಾರಿ ವಿರೋಧಕ್ಕೆ ಮಣಿದ ಸತೀಶ್ ಜಾರಕಿಹೊಳಿ, ಜಾರಕಿಹೊಳಿ ತವರು ಜಿಲ್ಲೆಯಲ್ಲಿ ಬಿಜೆಪಿ ಜನಸಂಕಲ್ಪ ಸಭೆ, ಸಿದ್ದರಾಮಯ್ಯ ವಿರುದ್ಧ ಪಿಸುಮಾತು ವಿಡಿಯೋ ವೈರಲ್, ಮರುಘಾ ಮಠ ಪ್ರಕರಣ ವಿರುದ್ಧ ಶ್ಯಾಮನೂರು ಶಿವಶಂಕರಪ್ಪ ಮಾತು ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ನೀಡಿರುವ ಹಿಂದೂ ವಿವಾದಾತ್ಮಕ ಹೇಳಿಕೆಗೆ ಕರ್ನಾಟಕದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇಡೀ ಕರ್ನಾಟಕದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಬಿಜೆಪಿಯ ಹಲವು ಶಾಸಕರು, ನಾಯಕರು ಭಾಗಿಯಾಗಿದ್ದರು. ಇದೀಗ ಸತೀಶ್ ಜಾರಕಿಹೊಳಿ ಹೇಳಿಕೆ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ ತಂದಿದೆ. ಸತೀಶ್ ಜಾರಕಿಹೊಳಿ ಹಿಂದೂ ವಿರೋಧಿ ಹೇಳಿಕೆಗೆ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಇದೀಗ ವಿಷಾಧ ವ್ಯಕ್ತಪಡಿಸಿದ್ದಾರೆ. ಆದರೆ ಕ್ಷಮೆ ಕೇಳಿಲ್ಲ. ಇತ್ತ ಬಿಜೆಪಿ ಕ್ಷಮೆಗೆ ಪಟ್ಟು ಹಿಡಿದಿದೆ. ಆದರೆ ತನ್ನ ಹೇಳಿಕೆಗೆ ಬದ್ದರಾಗಿರುವ ಜಾರಕಿಹೊಳಿ, ಕ್ಷಮೆ ಕೇಳಿಲ್ಲ.ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಿಕೆ ಶಿವಕುಮಾರ್ ಈ ಹೇಳಿಕೆಯನ್ನು ಖಂಡಿಸಿದ್ದಾರೆ. ಈ ಹೇಳಿಕೆಯನ್ನು ಸಮರ್ಥಿಸುವುದಿಲ್ಲ ಎಂದಿದ್ದಾರೆ. ಜಾರಕಿಹೊಳಿ ಇದೀಗ ಕಾಂಗ್ರೆಸ್‌ಗೆ ಬಿಸಿ ತುಪ್ಪವಾಗಿದೆ. 
 

Video Top Stories