Asianet Suvarna News Asianet Suvarna News

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಗುಟ್ಟು ಬಿಚ್ಚಿಟ್ಟ ಮಾಜಿ ಸಿಎಂ!

ಕಳೆದ ಡಿ.05ರಂದು 15 ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯಲ್ಲಿ ಬಿಜೆಪಿ 12 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಜೆಪಿ ಗೆಲುವಿನ ಹಿಂದಿನ ಕಾರಣವನ್ನು ಮಾಜಿ ಸಿಎಂ ಬಿಚ್ಚಿಟ್ಟಿದ್ದಾರೆ. 

ನವದೆಹಲಿ (ಜ.14): ರಾಜ್ಯ ರಾಜಕಾರಣದಲ್ಲಿ ನಿರ್ಣಾಯಕವಾಗಿದ್ದ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವ ಹಿಂದಿನ ಕಾರಣವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ! 

ಇದನ್ನೂ ಓದಿ | ಸುವರ್ಣನ್ಯೂಸ್ ಇಂಪ್ಯಾಕ್ಟ್: ಸಿದ್ದರಾಮಯ್ಯ ಅವಧಿಯ PWD ಹಗರಣದ ತನಿಖೆಗೆ ಆದೇಶ...

ಕಾಂಗ್ರೆಸ್-ಜೆಡಿಎಸ್ ಶಾಸಕರ ರಾಜೀನಾಮೆಯಿಂದ ತೆರವಾಗಿದ್ದ 15 ಕ್ಷೇತ್ರಗಳಿಗೆ  ಕಳೆದ ಡಿ.05ರಂದು ಉಪಚುನಾವಣೆ ನಡೆದಿತ್ತು. ಅವುಗಳ ಪೈಕಿ ಬಿಜೆಪಿ 12 ಸ್ಥಾನಗಳನ್ನು ಗೆದ್ದುಕೊಂಡರೆ, ಕಾಂಗ್ರೆಸ್ 2 ಮತ್ತು ಪಕ್ಷೇತರ ಅಭ್ಯರ್ಥಿ 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. 

Video Top Stories