
ವಕ್ಫ್ ಆಸ್ತಿ ಕಬಳಿಕೆ ಪ್ರಕರಣಕ್ಕೆ ಮರುಜೀವ: ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಲು ಬಿಜೆಪಿ ಪ್ಲಾನ್?
ರಾಜ್ಯದಲ್ಲಿರುವ ಸಾವಿರಾರು ಕೋಟಿ ರೂ. ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಚಿಂತನೆ ನಡೆದಿದೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಲು ಬಿಜೆಪಿ ಪ್ಲಾನ್ ಮಾಡಿದೆ ಎನ್ನಲಾಗಿದೆ.
ವಕ್ಫ್ ಆಸ್ತಿ ಕಬಳಿಕೆ ಪ್ರಕರಣಕ್ಕೆ ರಾಜ್ಯ ಸರ್ಕಾರವು ಮರು ಜೀವ ಕೊಟ್ಟಿದ್ದು, ಅನ್ವರ್ ಮನಪಾಡಿ ವರದಿಯ ತನಿಖೆ ಸಿಬಿಐಗೆ ಒಪ್ಪಿಸಲು ಚಿಂತನೆ ನಡೆದಿದೆ. ಈ ಕುರಿತು ಸಿಎಂ ಸಮ್ಮಖದಲ್ಲಿ ಚರ್ಚೆ ನಡೆದಿದ್ದು, ಸಿಬಿಐ ತನಿಖೆಗೆ ನೀಡಲು ಸಿಎಂ ಬೊಮ್ಮಾಯಿ ಒಪ್ಪಿರುವ ಬಗ್ಗೆ ಮಾಹಿತಿ ಹೊರ ಬಿದ್ದಿದೆ. ಕಾಂಗ್ರೆಸ್ ನಾಯಕರ ಮೇಲೆ ಈ ವಕ್ಫ್ ಆಸ್ತಿ ಕಬಳಿಸಿರುವ ಆರೋಪವಿದ್ದು, ರಾಹುಲ್ ಗಾಂಧಿಯವರ ಜೋಡೊ ಯಾತ್ರೆ ವೇಳೆಯೇ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಶಾಕ್ ನೀಡುವ ಸಾಧ್ಯತೆ ಇದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೆಳಮಟ್ಟದ ಪದ ಬಳಕೆ ಮಾಡಿದ ರಾಜಕೀಯ ನಾಯಕರು: ಜವಾಬ್ದಾರಿಯುತ ಸ್ಥಾನದಲ್ಲಿದ್ದವರು ಅನ್ನೋದೇ ದುರಂತ..!