Asianet Suvarna News Asianet Suvarna News

ಮಾಜಿ ಸಿಎಂ ರಾಜಕೀಯ ಕಾರ್ಯದರ್ಶಿ ಟಿಕೆಟ್‌ ಮಿಸ್: ಬೆಂಬಲಿಗರ ಮುಂದೆ ಕಣ್ಣೀರಿಟ್ಟ ಅರಸೀಕೆರೆ ಸಂತೋಷ್

ಅರಸೀಕೆರೆ ಕ್ಷೇತ್ರದ ಬಿಜೆಪಿ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ  ಎನ್.ಆರ್.ಸಂತೋಷ್ ಗೆ ಬಿಜೆಪಿ ಕಣ್ಣೀರು ಹಾಕಿದ್ದಾರೆ.

ಹಾಸನ (ಏ.13): ಅರಸೀಕೆರೆ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿ ಯಾಗಿದ್ದ ಮುಖ್ಯಮಂತ್ರಿ ಮಾಜಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಕಳೆದ 3 ವರ್ಷಗಳಿಂದ ಅರಸೀಕೆರೆಯಲ್ಲಿ ಮನೆ ಮಾಡಿಕೊಂಡು ರಾಜಕೀಯ ಮಾಡುತ್ತಿದ್ದರೂ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರ ಸಭೆಯಲ್ಲಿ ಕಣ್ಣೀರು ಹಾಕಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಸಂತೋಷ್ ಅವರ ರಾಜಕೀಯ ಕಾರ್ಯದರ್ಶಿ ಆಗಿದ್ದರು. ಮೊದಲನೇ ಪಟ್ಟಿಯಲ್ಲಿ ಎನ್‌ಆರ್ ಸಂತೋಷ್ ಇರಲಿಲ್ಲ. ಇನ್ನು ಅರಸೀಕೆರೆ ಕ್ಷೇತ್ರದಿಂದ ಟಿಕೆಟ್‌ ಹಂಚಿಕೆಯಾಗದ ಹಿನ್ನೆಲೆಯಲ್ಲಿ ತುಸು ಸಮಾಧಾನ ಮಾಡಿಕೊಂಡಿದ್ದರು. ಆದರೆ, ಬಿಜೆಪಿ ಬಿಡುಗಡೆ ಮಾಡಿದ 2ನೇ ಪಟ್ಟಿಯಲ್ಲಿ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಘೋಷಣೆ ಆಗಿದ್ದು, ಅದರಲ್ಲಿ ಸಂತೋಷ್‌ ಬದಲಿಗೆ ಜಿವಿಟಿ ಬಸವರಾಜ್‌ ಅವರಿಗೆ ಘೋಷಣೆ ಮಾಡಲಾಗಿದೆ. ಆದರೆ, ಇದರಿಂದ ತೀವ್ರ ಹತಾಶೆಗೊಂಡ ಸಂತೋಷ್‌ ಬೆಂಬಲಿಗರ ಸಭೆಯನ್ನು ನಡೆಸಿ ಇಂದು ಅಳಲು ತೋಡಿಕೊಂಡಿದ್ದಾರೆ. 

ಇನ್ನು ಬಿಜೆಪಿಯಲ್ಲಿ ಪ್ರಬಲ ಅಭ್ಯರ್ಥಿಯಾಗಿದ್ದರೂ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಸಂತೋಷ್‌ ಅವರನ್ನು ಜೆಡಿಎಸ್‌ ಸೆಳೆಯಲು ಪ್ರಯತ್ನ ಮಾಡುತ್ತಿದೆ. ಆದ್ದರಿಂದ ಜೆಡಿಎಸ್ ಅಭ್ಯರ್ಥಿ ಯಾಗಿ ಅರಸೀಕೆರೆ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.

Video Top Stories