Asianet Suvarna News Asianet Suvarna News

ನವಕರ್ನಾಟಕದ ಕಡೆ ಮೋದಿ ದೃಷ್ಟಿ, ಈ ಬಾರಿ ಬಿಜೆಪಿ ಗೆಲುವು ಖಚಿತ: ರಾಜೀವ್ ಚಂದ್ರಶೇಖರ್

ಮೋದಿ ರೋಡ್‌ ಶೋಗೆ ನಿರೀಕ್ಷೆ ಮೀರಿ ಜನರ ಆಗಮನ
ಈ ರೀತಿ ಜನರ ಆಶೀರ್ವಾದವನ್ನು ಇಲ್ಲಿಯವರೆಗೆ ನೋಡಿಲ್ಲ
ಬೆಂಗಳೂರಿನಲ್ಲಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿಕೆ

ಬೆಂಗಳೂರು: ನರೇಂದ್ರ ಮೋದಿಯವರ ಮೇಲೆ ಜನರಿಗೆ ಸಾಕಷ್ಟು ಆಕರ್ಷಣೆ ಇದೆ. ನವ ಕರ್ನಾಟಕದ ಕಡೆ ಮೋದಿ ದೃಷ್ಟಿ ಇದೆ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ. ಕಾಂಗ್ರೆಸ್‌ 65 ವರ್ಷ ವೋಟ್‌ ಬ್ಯಾಂಕಿಂಗ್‌ ರಾಜಕಾರಣ ಮಾಡ್ತು. ಡಿ.ಕೆ. ಶಿವಕುಮಾರ್‌, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಹುಲ್‌ ಗಾಂಧಿಗೆ ಜನ ಉತ್ತರ ಕೊಡ್ತಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಖಚಿತ. ಈ ರೀತಿಯ ಜನರ ಆಶೀರ್ವಾದವನ್ನು ಇಲ್ಲಿಯವರೆಗೆ ನಾನು ನೋಡಿಲ್ಲ. ಮೋದಿಯವರ ರೋಡ್ ಶೋಗೆ ನಿರೀಕ್ಷೆಗೂ ಮೀರಿದ ಜನ ಆಗಮಿಸಿದ್ದಾರೆ ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಸಂತಸವನ್ನು ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ: ಹುಬ್ಬಳ್ಳಿ ಬಿಜೆಪಿಯ ಭದ್ರಕೋಟೆ, ಲಕ್ಷ್ಮಣ ಸವದಿ ಸೋಲು ನಿಶ್ಚಿತ: ಅಮಿತ್ ಶಾ

Video Top Stories