
ರಮೇಶ್ ಜಾರಕಿಹೊಳಿ ರಾಜೀನಾಮೆ ಬೆದರಿಕೆ: ಸಿಎಂ ಪ್ರತಿಕ್ರಿಯಿಸಿದ್ದು ಹೀಗೆ
ರಾಸಲೀಲೆ ಸಿ.ಡಿ ಪ್ರಕರಣದ ಬಳಿಕ ಸಚಿವ ಸ್ಥಾನ ಕಳೆದುಕೊಂಡಿರೋ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಸಚಿವ ಸ್ಥಾನಕ್ಕೇರಲು ಕಸರತ್ತು ನಡೆಸುತ್ತಿದ್ದಾರೆ.
ಬೆಂಗಳೂರು, (ಜೂನ್.25): ರಾಸಲೀಲೆ ಸಿ.ಡಿ ಪ್ರಕರಣದ ಬಳಿಕ ಸಚಿವ ಸ್ಥಾನ ಕಳೆದುಕೊಂಡಿರೋ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಸಚಿವ ಸ್ಥಾನಕ್ಕೇರಲು ಕಸರತ್ತು ನಡೆಸುತ್ತಿದ್ದಾರೆ.
Add Asianetnews Kannada as a Preferred Source

ಮತ್ತೆ ಮುಂಬೈ ಅಡ್ಡಕ್ಕೆ ಜಾರಕಿಹೊಳಿ, ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದ ಸಾಹುಕಾರ
ಹೀಗಾಗಿ ಇದಕ್ಕೆ ಪೂರಕವೆಂಬಂತೆ ಮಹಾರಾಷ್ಟ್ರ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮೂಲಕ ಒತ್ತಡ ಹಾಕಿಸುತ್ತಿದ್ದಾರೆ. ಅಲ್ಲದೇ ಮತ್ತೆ ಸಚಿವ ಸ್ಥಾನ ನೀಡದಿದ್ದರೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಇನ್ನು ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.