Asianet Suvarna News Asianet Suvarna News

BSY On Eshwarappa: ಟಿಕೆಟ್‌ ವಿಚಾರ ಎಲ್ಲ ಹೈಕಮಾಂಡ್‌ ತೀರ್ಮಾನ ಮಾಡಿದ್ದು: ಬಿ.ಎಸ್.ಯಡಿಯೂರಪ್ಪ

ಕೆ.ಎಸ್‌.ಈಶ್ವರಪ್ಪ ಜೊತೆ ಹಿರಿಯ ಮುಖಂಡರೆಲ್ಲಾ ಮಾತನಾಡುತ್ತೇವೆ. ಇದು ಹೈಕಮಾಂಡ್‌ ತೀರ್ಮಾನ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 

ಕೆ.ಎಸ್‌.ಈಶ್ವರಪ್ಪ ಬಂಡಾಯ ಸ್ಪರ್ಧೆಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ(BS Yediyurappa) ಪ್ರತಿಕ್ರಿಯೆ ನೀಡಿದ್ದು, ಈಶ್ವರಪ್ಪ ಜೊತೆ ಹಿರಿಯ ಮುಖಂಡರೆಲ್ಲಾ ಮಾತಾಡ್ತೇವೆ. ಟಿಕೆಟ್‌ (Ticket) ವಿಚಾರ ಎಲ್ಲ ಹೈಕಮಾಂಡ್‌ ತೀರ್ಮಾನ ಮಾಡಿದ್ದು. ಪದೇ ಪದೇ ಯಡಿಯೂರಪ್ಪ ಅಂತಾ ಯಾಕೆ ಹೇಳ್ತಾರೋ ಗೊತ್ತಿಲ್ಲ. ಟಿಕೆಟ್‌ ವಿಚಾರದಲ್ಲಿ ನನ್ನ ಪಾತ್ರವಿಲ್ಲ ಎಂದು ಬೆಂಗಳೂರಿನಲ್ಲಿ(Bengaluru) ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬಿ.ವೈ.ವಿಜಯೇಂದ್ರ(BY Vijayendra) ಮಾತನಾಡಿ, ಈಶ್ವರಪ್ಪ ಪಕ್ಷದ ತೀರ್ಮಾನವನ್ನು ಗೌರವಿಸಬೇಕು. ಕೇಂದ್ರ ನಾಯಕರು ಬೊಮ್ಮಾಯಿಗೆ ಟಿಕೆಟ್‌ ನೀಡಿದ್ದಾರೆ. ಬಿಜೆಪಿ ವರಿಷ್ಠರು ಅವರ ಮನವೊಲಿಸುತ್ತಾರೆ ಎಂದು ವಿಜಯೇಂದ್ರ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ನೊಂದ ಕಾರ್ಯಕರ್ತರ ಧ್ವನಿಯಾಗಿ, ಹಿಂದುತ್ವದ ಪರವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಕೆ.ಎಸ್‌.ಈಶ್ವರಪ್ಪ

Video Top Stories