Asianet Suvarna News Asianet Suvarna News

ಮುಧೋಳ ಕ್ಷೇತ್ರದಲ್ಲಿ ಕಾರಜೋಳ ಭರ್ಜರಿ ಪ್ರಚಾರ: ವಿಜಯೇಂದ್ರ ಸಾಥ್‌

ಮುಧೋಳದಲ್ಲಿ ಗೋವಿಂದ ಕಾರಜೋಳ ಪ್ರಚಾರ
ಗೋವಿಂದ ಕಾರಜೋಳ ಪರ ವಿಜಯೇಂದ್ರ ಮತಶಿಕಾರಿ
ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ರೋಡ್ ಶೋ  

ಬಾಗಲಕೋಟೆ: ಜಿಲ್ಲೆಯ ಮುಧೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಗೋವಿಂದ ಕಾರಜೋಳ ಪರ ಬಿ.ವೈ. ವಿಜಯೇಂದ್ರ ಭರ್ಜರಿ ರೋಡ್‌ ಶೋ ಮೂಲಕ ಮತಯಾಚನೆ ಮಾಡಿದರು. ಮುಧೋಳ ಪಟ್ಟಣದ ಶಿವಾಜಿ ವೃತ್ತದಲ್ಲಿ ಆರಂಭವಾದ ರೋಡ್ ಶೋ, ಅಂಬೇಡ್ಕರ್‌ , ಬಸವೇಶ್ವರ ಸರ್ಕಲ್‌ ಮೂಲಕ ಬಸ್‌ ನಿಲ್ದಾಣದಲ್ಲಿ ಮುಕ್ತಾಯವಾಯಿತು. ನಾನು ಈ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಕೈಹಿಡಿಯಲಿವೆ. ಇದು ನನ್ನ ಕೊನೆ ಚುನಾವಣೆ ಈ ಸಾರಿ ಎಲ್ಲಾ ಚುನಾವಣೆಗಿಂತ ಹೆಚ್ಚಿನ ಮತಗಳಿಂದ ಗೆಲ್ಲುತ್ತೇನೆ ಎಂದು ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.  

Video Top Stories